
ಬೆಂಗಳೂರು(ಆ. 28): ಬಿಎಸ್ ಯಡಿಯೂರಪ್ಪನವರು ಇನ್ನೆರಡು ದಿನ ನಿರಾಳರಾಗಿರಬಹುದು. ಶಿವರಾಮ ಕಾರಂತ ಬಡಾವಣೆ ಡೀನೋಟಿಫಿಕೇಶನ್ ಪ್ರಕರಣದಲ್ಲಿ ಎಫ್'ಐಆರ್ ರದ್ದು ಕೋರಿ ಬಿಎಸ್'ವೈ ಸಲ್ಲಿಸಿದ್ದ ರಿಟ್ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ಏಕಸದಸ್ಯ ಪೀಠವು ಆಗಸ್ಟ್ 30ಕ್ಕೆ ಮುಂದೂಡಿದೆ. ಇನ್ನೆರಡು ದಿನ ಬಿಎಸ್'ವೈ ಅವರನ್ನು ಬಂಧಿಸದಂತೆ ಸೂಚಿಸಲಾಗಿದೆ.
ಇಂದಿನ ವಿಚಾರಣೆಯಲ್ಲಿ ಯಡಿಯೂರಪ್ಪ ಪರ ವಕೀಲ ಸಿ.ವಿ.ನಾಗೇಶ್ ವಾದ ಮಂಡಿಸಿದರು; ಭ್ರಷ್ಟಾಚಾರ ನಿಗ್ರಹ ದಳದ ಪರ ರವಿವರ್ಮಕುಮಾರ್ ವಾದ ಮಂಡಿಸಿದರು. ನ್ಯಾ| ಅರವಿಂದ್ ಕುಮಾರ್ ಅವರ ಏಕಸದಸ್ಯ ಹೈಕೋರ್ಟ್ ಪೀಠದಲ್ಲಿ ಈ ಅರ್ಜಿಯ ವಿಚಾರಣೆ ನಡೆಯುತ್ತಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.