ರಾಮಲಿಂಗಾರೆಡ್ಡಿಯವರನ್ನು ಸೋಲಿಸಬೇಕೆಂದು ಪಣ ತೊಟ್ಟಿದೆಯೆ ಬಿಜೆಪಿ, ಹಾಗಾದರೆ ಸ್ಪರ್ಧಿಸುವವರು ಯಾರು ?

Published : Mar 04, 2018, 04:20 PM ISTUpdated : Apr 11, 2018, 12:47 PM IST
ರಾಮಲಿಂಗಾರೆಡ್ಡಿಯವರನ್ನು ಸೋಲಿಸಬೇಕೆಂದು ಪಣ ತೊಟ್ಟಿದೆಯೆ ಬಿಜೆಪಿ, ಹಾಗಾದರೆ ಸ್ಪರ್ಧಿಸುವವರು ಯಾರು ?

ಸಾರಾಂಶ

ಈ ನಡುವೆ ಮಾಜಿ ಸಚಿವ ಗಾಲಿ ಜನಾರ್ದನರೆಡ್ಡಿ ಅವರ ಸಂಬಂಧಿ ನಲ್ಲಾ ರೆಡ್ಡಿ ಎಂಬುವರು ಪ್ರಯತ್ನ ಆರಂಭಿಸಿದ್ದಾರೆ.

ಪ್ರಭಾವಿ ಸಚಿವ ರಾಮಲಿಂಗಾರೆಡ್ಡಿ ಈ ಬಾರಿಯೂ ಕಾಂಗ್ರೆಸ್ಸಿಂದ ಕಣಕ್ಕೆ ಇಳಿಯುವುದು ಖಚಿತ. ಅವರ ವಿರುದ್ಧ ಬಿಜೆಪಿ ಪ್ರಬಲ ಅಭ್ಯರ್ಥಿಯನ್ನು ಕಣಕ್ಕಿಳಿಸುವುದಿಲ್ಲ ಎಂಬುದು ಸಾಮಾನ್ಯವಾಗಿ ಕೇಳಿಬರುವ ಮಾತು.

ಆದರೆ, ಇದು ಸಂಪೂರ್ಣ ಸುಳ್ಳು ಎನ್ನುವುದಕ್ಕೂ ಆಗುವುದಿಲ್ಲ. ಈ ಬಾರಿ ಬಿಜೆಪಿ ಟಿಕೆಟ್ ಆಕಾಂಕ್ಷಿಗಳಲ್ಲಿ ಸಹ ವಕ್ತಾರ ವಿವೇಕ್ ರೆಡ್ಡಿ ಪ್ರಮುಖರು. ಜತೆಗೆ ಪಕ್ಷದ ರಾಜ್ಯ ಕಾರ್ಯದರ್ಶಿಯೂ ಆಗಿರುವ, ಯಡಿಯೂರಪ್ಪ ಆಪ್ತ ಜಯದೇವ್ ಕೂಡ ನಿರೀಕ್ಷೆಯಲ್ಲಿದ್ದಾರೆ. ಇವರಿಬ್ಬರೂ ರಾಮಲಿಂಗಾರೆಡ್ಡಿ ಅವರನ್ನು ಎದುರಿಸುವುದು ಕಷ್ಟ ಎಂಬ ಮಾತು ಈಗಲೇ ಚಾಲ್ತಿಯಲ್ಲಿದೆ. ಈ ನಡುವೆ ಮಾಜಿ ಸಚಿವ ಗಾಲಿ ಜನಾರ್ದನರೆಡ್ಡಿ ಅವರ ಸಂಬಂಧಿ ನಲ್ಲಾ ರೆಡ್ಡಿ ಎಂಬುವರು ಪ್ರಯತ್ನ ಆರಂಭಿಸಿದ್ದಾರೆ. ಆರ್ಥಿಕವಾಗಿ ಸಬಲರಾಗಿರುವ ಅವರನ್ನು ಕಣಕ್ಕಿಳಿಸಿದರೆ ರಾಮಲಿಂಗಾರೆಡ್ಡಿ ಅವರಿಗೆ ಪ್ರಬಲ ಪೈಪೋಟಿ ನೀಡಬಹುದು ಎನ್ನಲಾಗುತ್ತಿದೆ. ಜೆಡಿಎಸ್‌ನಿಂದ ಬಿಬಿಎಂಪಿ ಸದಸ್ಯ ದೇವದಾಸ್ ಅಭ್ಯರ್ಥಿ ಸ್ಪರ್ಧಿಸಲಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಪರಮೇಶ್ವರ್ ಸಿಎಂ ಆಗಲಿ: 25ಕ್ಕೂ ಹೆಚ್ಚು ಮಠಾಧೀಶರ ಆಗ್ರಹ
ನೌಕರರಿಗೆ ಸಂಬಳ, ಪಿಂಚಣಿ ನೀಡಲು ಕೇರಳದಲ್ಲಿ ತತ್ವಾರ