
ನವದೆಹಲಿ : 2018ನೇ ಸಾಲಿನ ಕೇಂದ್ರ ಸರ್ಕಾರದ ಬಜೆಟ್’ನಲ್ಲಿ ಹಿರಿಯ ನಾಗರಿಕರು ಹಲವು ರೀತಿಯಾದ ತೆರಿಗೆ ಪ್ರಯೋಜನಗಳನ್ನು ಪಡೆದುಕೊಂಡಿದ್ದಾರೆ.
ಪ್ರಮುಖವಾಗಿ ಈ ಬಜೆಟ್’ನಲ್ಲಿ ಟ್ಯಾಕ್ಸ್ ವಿನಾಯಿತಿ ಮಿತಿಯಲ್ಲಿ ಹೆಚ್ಚಳ ಮಾಡಲಾಗಿದೆ. ಬ್ಯಾಂಕ್, ಅಂಚೆ ಕಚೇರಿಗಳ ಠೇವಣಿಗಳ ಮೇಲಿನ ಬಡ್ಡಿಯ ಆದಾಯದ ವಿನಾಯಿತಿ 10 ಸಾವಿರದಿಂದ 50 ಸಾವಿರ ರು.ವರೆಗೆ ಏರಿಕೆಯಾಗಿದೆ.
ಎಲ್ಲಾ ಫಿಕ್ಸೆಡ್ ಡೆಪಾಸಿಟ್ ಯೋಜನೆಗಳಿಗೆ ಹೆಚ್ಚಿನ ಅನುಕೂಲವನ್ನು ಒದಗಿಸಲಾಗಿದೆ. ಆರೋಗ್ಯ ಸೇವೆಗಳ ಮೇಲಿನ ಖರ್ಚಿನ ಡಿಡಕ್ಷನ್ ಹೆಚ್ಚಳ ಮಾಡಲಾಗಿದೆ.
ಪ್ರಧಾನ ಮಂತ್ರಿ ವಯ ವಂದನ ಯೋಜನೆಯನ್ನು 2020ರವರೆಗೆ ವಿಸ್ತರಣೆ ಮಾಡಲು ಪ್ರಸ್ತಾವನೆ ಇಡಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.