
ಬೆಂಗಳೂರು(ಆ.17): ಕಳೆದ ಎರಡು ದಿನಗಳಿಂದ ಬೆಂಗಳೂರಿನಲ್ಲಿ ಸುರಿದ ಭಾರೀ ಮಳೆಗೆ ಜನರ ಬದುಕು ಅಸ್ತವ್ಯಸ್ತಗೊಂಡಿತ್ತು. ಕೋರಮಂಗಲದ ಈಜಿಪುರದಲ್ಲಿ ನಿರ್ಮಾಣ ಹಂತದಲ್ಲಿದ್ದ 5 ಅಂತಸ್ತಿನ ಕಟ್ಟಡ ದಿಢೀರ್ ವಾಲಿದೆ. ನಿರ್ಮಾಣ ಹಂತದ ಕಟ್ಟಡದ ಪಿಲ್ಲರ್'ನಲ್ಲಿ ಬಿರುಕು ಕಾಣಿಸಿಕೊಂಡಿದ್ದರಿಂದ ಕಟ್ಟಡ ವಾಲಿದೆ. ಸ್ಥಳಕ್ಕೆ ಬಂದ ಪೊಲೀಸರು, ಅಗ್ನಿಶಾಮಕ ಸಿಬ್ಬಂದಿ ಕಟ್ಟಡದ ಅಕ್ಕಪಕ್ಕದ ನಿವಾಸಿಗರನ್ನು ಬೇರೆಡೆ ಸ್ಥಳಾಂತರಿಸಿದ್ದಾರೆ.
ಗಮನಿಸಬೇಕಾದ ವಿಷಯವೆಂದರೆ ನಿರ್ಮಾಣ ಹಂತದ 5 ಅಂತಸ್ಥಿನ ಕಟ್ಟಡದಲ್ಲಿ ನಿಯಮ ಉಲ್ಲಂಘನೆ ಸ್ಪಷ್ಟವಾಗಿ ಕಂಡುಬಂದಿದೆ. ಬಿಬಿಎಂಪಿ ನಿಯಮ ಪ್ರಕಾರ 20/40 ಚದರ ಅಡಿ ಸೈಟ್'ನಲ್ಲಿ ಕೇವಲ 3 ಅಂತಸ್ತಿನ ಕಟ್ಟಡ ನಿರ್ಮಿಸಲು ಅವಕಾಶವಿದೆ. ಆದರೆ ಇಲ್ಲಿ 5 ಅಂತಸ್ತಿನ ಕಟ್ಟಡ ನಿರ್ಮಿಸಿ ನಿಯಮ ಬ್ರೇಕ್ ಮಾಡಿದ್ದಾರೆ. ಸದ್ಯ ಈಜೀಪುರದಲ್ಲಿ ತೆರವು ಕಾರ್ಯ ನಡೆಯುತ್ತಿದ್ದ, ಇಂದು ಕೂಡ ಮುಂದುವರೆಯಲಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.