
ಬೆಂಗಳೂರು(ಜು.16): ನಿರ್ಮಾಣ ಹಂತದ ಕಟ್ಟಡದಲ್ಲಿ ಜಿಲೆಟಿನ್ ಕಡ್ಡಿ ಸ್ಫೋಟಗೊಂಡ ಘಟನೆ ತಡರಾತ್ರಿ ಬೆಂಗಳೂರಿನಲ್ಲಿ ನಡೆದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿಯಾಗಿಲ್ಲ.
ಬೇಗೂರು ಮುಖ್ಯರಸ್ತೆಯ ರಾಯಲ್ ಮೆರಿಡಿಯನ್ ಲೇಔಟ್ನ ನಿರ್ಮಾಣ ಹಂತದ ಕಟ್ಟಡ ಕಾಮಗಾರಿ ಸಂದರ್ಭದಲ್ಲಿ, ಕಲ್ಲಿನ ಬಂಡೆ ಬಂದ ಹಿನ್ನೆಲೆ ಜಿಲೆಟಿನ್ ಕಡ್ಡಿಯಿಂದ ಸ್ಫೋಟಿಸಿದ್ದಾರೆ. ಸ್ಫೋಟದಿಂದ ಕೆಲ ಕಾರ್ಮಿಕರಿಗೆ ಸಣ್ಣಾ ಪುಟ್ಟ ಗಾಯಗಳಾಗಿದ್ದು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿಲಾಗಿದೆ. ಸ್ಥಳೀಯರು ಕೆಲಕಾಲ ಗಾಬರಿಗೊಂಡಿದ್ದು, ಬೇಗೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಜಿಲೆಟಿನ್ ಕಡ್ಡಿ ಮತ್ತು ಸ್ಫೋಟಕ ಪುಡಿಯನ್ನ ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಕಟ್ಟಡ ಮಾಲೀಕ ಮತ್ತು ಕಾರ್ಮಿಕರನ್ನು ವಶಕ್ಕೆ ಪಡೆದು ತನಿಖೆಕೈಗೊಂಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.