
ಬೆಳಗಾವಿ [ಜು.28]: ಬೆಳಗಾವಿ, ಹುಬ್ಬಳ್ಳಿ-ಧಾರವಾಡ ತ್ರಿವಳಿ ನಗರಗಳಿಗೆ ಬುಲೆಟ್ ಟ್ರೈನ್ ಸಂಪರ್ಕ ಕಲ್ಪಿಸುವ ಚಿಂತನೆ ನಡೆದಿದ್ದು, ಈ ಬಗ್ಗೆ ಅಧ್ಯಯನ ಪ್ರಗತಿಯಲ್ಲಿದೆ. ಇದಕ್ಕೆ ಅಧಿಕಾರಿಗಳು ಮತ್ತು ಸಾರ್ವಜನಿಕರ ಸಹಕಾರ ಅಗತ್ಯ ಎಂದು ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್ ಅಂಗಡಿ ತಿಳಿಸಿದರು.
ನಗರದ ದಂಡು ಮಂಡಳಿಯಲ್ಲಿ ಶನಿವಾರ ಜರುಗಿದ ಸಭೆಯಲ್ಲಿ ಮಾತನಾಡಿದ ಅವರು, ಬೆಳಗಾವಿ, ಧಾರವಾಡ-ಹುಬ್ಬಳ್ಳಿ ತ್ರಿವಳಿ ನಗರಗಳಿಗೆ ಬುಲೆಟ್ ಟ್ರೈನ್ ಸಂಪರ್ಕ ಕಲ್ಪಿಸುವ ಚಿಂತನೆಯನ್ನು ಈಗಾಗಲೇ ರೈಲ್ವೆ ಇಲಾಖೆ ನಡೆಸಿದೆ. ಈ ಕುರಿತು ಅಧ್ಯಯನವೂ ಪ್ರಗತಿಯಲ್ಲಿದ್ದು, ತ್ವರಿತವಾಗಿ ಜಾರಿಗೆ ತರಲಾಗುವುದು ಎಂದರು.
ಪ್ರವಾಹದಲ್ಲಿ ಸಿಲುಕಿದವರ ರಕ್ಷಣೆ ತ್ವರಿತ: ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಸತತ ಮಳೆಯಿಂದಾಗಿ ಪ್ರವಾಹದಲ್ಲಿ ಸಿಕ್ಕಿಹಾಕಿಕೊಂಡಿರುವ ಮಹಾಲಲಕ್ಷ್ಮೀ ಎಕ್ಸ್ಪ್ರೆಸ್ ರೈಲಿನಲ್ಲಿರುವ ಪ್ರಯಾಣಿಕರ ರಕ್ಷಣಾ ಕಾರ್ಯ ತ್ವರಿತವಾಗಿ ನಡೆಸಲು ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.
ಮುಂಬೈ ಮತ್ತು ಕೊಲ್ಹಾಪುರ ಮಧ್ಯ ಸಂಚರಿಸುತ್ತಿದ್ದ ಮಹಾಲಕ್ಷ್ಮೀ ಎಕ್ಸ್ಪ್ರೆಸ್ ರೈಲು ಬದ್ಲಾಪುರದಲ್ಲಿ ಮಧ್ಯರಾತ್ರಿ ಪ್ರವಾಹದಲ್ಲಿ ಸಿಲುಕಿದೆ. ಈ ರೈಲಿನಲ್ಲಿ 750 ಜನ ಪ್ರಯಾಣಿಸುತ್ತಿದ್ದರು. ಪ್ರಯಾಣಿಕರ ಕುರಿತು ವಿಭಾಗೀಯ ಪ್ರಬಂಧಕರಿಂದ ಮಾಹಿತಿ ಪಡೆದಿದ್ದೇನೆ. ನೌಕಾದಳ, ವಾಯುದಳದ ಸಿಬ್ಬಂದಿ ರಕ್ಷಣಾ ಕಾರ್ಯದಲ್ಲಿ ತೊಡಗಿದ್ದರು. ಪ್ರಯಾಣಿಕರು ಆತಂಕ ಪಡುವ ಅಗತ್ಯವಿಲ್ಲ ಎಂದು ಹೇಳಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.