
ನವದೆಹಲಿ[ಜು.23] ಕುಟುಂಬದ ಎಲ್ಲರೂ ಆತ್ಮಹತ್ಯೆ ಮಾಡಿಕೊಂಡ ನಂತರ ಸಾಕು ನಾಯಿ ಟಾಮಿಯನ್ನು ಪ್ರಾಣಿಹಕ್ಕುಗಳ ಕಾರ್ಯಕರ್ತರೊಬ್ಬರು ಪಡೆದುಕೊಂಡಿದ್ದರು. ಆರೋಗ್ಯದಲ್ಲಿ ಚೇತರಿಕೆ ಇದೆ ಎಂದು ಹೇಳಿದ್ದರು. ಆದರೆ ಕೆವಲೇ ದಿನದಲ್ಲಿ ನಾಯಿ ಸಹ ಇಹಲೋಕ ತ್ಯಜಿಸಿದೆ.
ಭಾಟಿಯಾ ಕುಟುಂಬ ಆತ್ಮಹತ್ಯೆ ಮಾಡಿಕೊಂಡ ನಂತರ ಟಾಮಿಯನ್ನು ಮಾಧ್ಯಮಗಳಲ್ಲಿ ನೋಡಿದ ಸಂಜಯ್ ಮೋಹಪಾತ್ರ ಎಂಬುವರು ಟಾಮಿಯನ್ನು ನೋಡಿಕೊಳ್ಳುವುದರ ಕುರಿತು ಪೊಲೀಸರನ್ನು ಸಂಪರ್ಕಿಸಿ ತಮ್ಮ ಕೇರ್ ಸೆಂಟರ್ಗೆ ಕರೆದೊಯ್ದಿದ್ದರು. ಮೊದಲ ಬಾರಿ ಕೇರ್ ಸೆಂಟರ್ಗೆ ಕರೆದುಕೊಂಡು ಬಂದಾಗ ಟಾಮಿಗೆ 108 ಡಿಗ್ರಿ ಜ್ವರವಿತ್ತು. ತುಂಬಾ ಆಕ್ರಮಣಕಾರಿಯಾಗಿದ್ದ ಟಾಮಿ ಯಾರೇ ಹತ್ತಿರ ಹೋದರೂ ಕಚ್ಚಲು ಬರುತ್ತಿತ್ತು. ಆದರೆ ನಿಧಾನವಾಗಿ ಚೇತರಿಸಿಕೊಂಡಿತ್ತು.
11 ಜನರ ಆತ್ಮಹತ್ಯೆ ಬಗ್ಗೆ ಬಯಲಾಯ್ತು ಬೆಚ್ಚಿ ಬೀಳಿಸುವ ಸಂಗತಿ..!
ಇಡೀ ಕುಟುಂಬ ಆತ್ಮಹತ್ಯೆ ಮಾಡಿಕೊಳ್ಳುವ ವೇಳೆ ಈ ನಾಯಿಯನ್ನು ಕಟ್ಟಿ ಹಾಕಲಾಗಿತ್ತು. ಒಂದು ವೇಳೆ ಕಟ್ಟಿ ಹಾಕದಿದ್ದರೆ ಕುಟುಂಬದವರಿಗೆ ಆತ್ಮಹತ್ಯೆ ಮಾಡಿಕೊಳ್ಳಲು ಅಡ್ಡ ನಿಲ್ಲುವ ಸಾಧ್ಯೆತೆಯೂ ಇತ್ತು ಎನ್ನಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.