ಆ. 7 ಕ್ಕೆ ಬಸ್, ಆಟೋ, ಕ್ಯಾಬ್‌ಗಳು ಬಂದ್?

Published : Jul 31, 2018, 11:54 AM ISTUpdated : Jul 31, 2018, 11:56 AM IST
ಆ. 7 ಕ್ಕೆ  ಬಸ್, ಆಟೋ, ಕ್ಯಾಬ್‌ಗಳು ಬಂದ್?

ಸಾರಾಂಶ

-ಕೇಂದ್ರ ಸರ್ಕಾರದ ವಿರುದ್ಧ ರಾಷ್ಟ್ರವ್ಯಾಪಿ ಮುಷ್ಕರ -ಮೋಟಾರು ವಾಹನ ತಿದ್ದುಪಡಿ ಮಸೂದೆಯನ್ನು ಹಿಂಪಡೆಯಬೇಕು. ಮಸೂದೆ ಜಾರಿಯಿಂದ ಅಸಂಘಟಿತ ಸಾರಿಗೆ ಕಾರ್ಮಿಕರು ಬೀದಿಗೆ ಬರಲಿದ್ದಾರೆ.

ಬೆಂಗಳೂರು (ಜು. 31): ಮೋಟಾರು ವಾಹನ ತಿದ್ದುಪಡಿ ಮಸೂದೆ -2017 ನ್ನು ಕೇಂದ್ರ ಸರ್ಕಾರ ಕೈಬಿಡಬೇಕೆಂದು ಒತ್ತಾಯಿಸಿ ಆ.7 ರಂದು ಕರೆ ನೀಡಿರುವ ರಾಷ್ಟ್ರವ್ಯಾಪಿ ಸಾರಿಗೆ ಮುಷ್ಕರಕ್ಕೆ ರಾಜ್ಯರಸ್ತೆ ಸಾರಿಗೆ ನಿಗಮಗಳು ಸೇರಿದಂತೆ ಆಟೋ, ಕ್ಯಾಬ್ ಹಾಗೂ ಖಾಸಗಿ ವಾಹನ ಮಾಲೀಕರು ಬೆಂಬಲಿಸಿದ್ದಾರೆ ಎಂದು ಸಿಐಟಿಯು ರಾಜ್ಯ  ಉಪಾಧ್ಯಕ್ಷ ಕೆ.ಪ್ರಕಾಶ್ ತಿಳಿಸಿದರು.

ಈಗಾಗಲೇ ಲೋಕಸಭೆಯಲ್ಲಿ ಅನುಮೋದಿಸಿರುವ ಮೋಟಾರು ವಾಹನ ತಿದ್ದುಪಡಿ ಮಸೂದೆಯನ್ನು ಹಿಂಪಡೆಯಬೇಕು. ಮಸೂದೆ ಜಾರಿಯಿಂದ ಅಸಂಘಟಿತ ಸಾರಿಗೆ ಕಾರ್ಮಿಕರು ಬೀದಿಗೆ ಬರಲಿದ್ದಾರೆ. ಹಾಗಾಗಿ, ರಾಷ್ಟ್ರವ್ಯಾಪ್ತಿಗೆ ಸಾರಿಗೆ ಮುಷ್ಕರಕ್ಕೆ ಕರೆ ನೀಡಲಾಗಿದೆ ಎಂದು ತಿಳಿಸಿದರು. ದೊಡ್ಡ ಕಂಪನಿಗಳಿಗೆ ಅನುಕೂಲ ಮಾಡುವುದಕ್ಕೆ  ಕೇಂದ್ರ ಸರ್ಕಾರ ಮುಂದಾಗಿದೆ.

ಮಸೂದೆ ಜಾರಿಯಿಂದ ಇಡೀ ಸಾರಿಗೆ ವ್ಯವಸ್ಥೆ ಖಾಸಗಿ ಕಂಪನಿಗಳ ಕಪಿಮುಷ್ಟಿಗೆ ಹೋಗಲಿದೆ. ರಾಜ್ಯ ಮತ್ತು ರಾಷ್ಟ್ರದ ಸಮವರ್ತಿ ಪಟ್ಟಿಯಲ್ಲಿರುವ ಸಾರಿಗೆ ವ್ಯವಸ್ಥೆ ಕೇಂದ್ರ ಸರ್ಕಾರದ ವ್ಯಾಪ್ತಿಗೆ ಹೋಗಲಿದ್ದು, ಸಾರಿಗೆ ವ್ಯವಸ್ಥೆ ಮೇಲಿನ ರಾಜ್ಯಸರ್ಕಾರದ ಅಧಿಕಾರ ಮೊಟಕುಗೊಳ್ಳಲಿದೆ. ರಾಜ್ಯದ ಆರ್‌ಟಿಓ ಕಚೇರಿಗಳಿಗೆ ಬೀಗ ಹಾಕಬೇಕಾಗುತ್ತದೆ ಎಂದು ಕಳವಳ ವ್ಯಕ್ತಪಡಿಸಿದರು.

ಖಾಸಗಿ ಸಂಸ್ಥೆಗಳ  ಒತ್ತಡಕ್ಕೆ ಮಣಿದು ಕೇಂದ್ರ ಸರ್ಕಾರ ಮತ್ತೆ  ಮಸೂದೆ ಅಂಗೀಕರಿಸುವುದಕ್ಕೆ ಮುಂದಾಗಿದೆ. ಯಾವುದೇ ಕಾರಣಕ್ಕೂ ಮಸೂದೆ ಅಂಗೀಕರಣಕ್ಕೆ ಅವಕಾಶ ನೀಡಬಾರದು ಎಂದರು. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ರಣವೀರ್ ನಟನೆಯ ಧುರಂಧರ್ ಸಿನಿಮಾದ ಕತೆ ಭಾರತೀಯ ಸೇನೆಯ ಹೀರೋ ಮೇಜರ್ ಮೋಹಿತ್ ಶರ್ಮಾ ಅವರದ್ದಾ?
ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?