40 ಅಡಿ ಕಂದಕಕ್ಕೆ ಉರುಳಿ ಭೀಕರ ಬಸ್ ಅಪಘಾತ : 29 ಮಂದಿ ದುರ್ಮರಣ

Published : Jul 08, 2019, 11:18 AM ISTUpdated : Jul 08, 2019, 11:24 AM IST
40 ಅಡಿ ಕಂದಕಕ್ಕೆ ಉರುಳಿ ಭೀಕರ ಬಸ್ ಅಪಘಾತ : 29 ಮಂದಿ ದುರ್ಮರಣ

ಸಾರಾಂಶ

40 ಅಡಿ ಕಂದಕಕ್ಕೆ ಉರುಳಿ  ಸಂಭವಿಸಿದ ಭೀಕರ ಬಸ್ ಅಪಘಾತದಲ್ಲಿ 29 ಮಂದಿ ದುರ್ಮರಣವನ್ನಪ್ಪಿದ್ದಾರೆ. 10ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. 

ನವದೆಹಲಿ [ಜು.08] :  ಆಗ್ರಾ ಬಳಿಯ ಯಮುನಾ ಎಕ್ಸ್ ಪ್ರೆಸ್  ವೇ ನಲ್ಲಿ ಸೋಮವಾರ ಬೆಳ್ಳಂಬೆಳಗ್ಗೆ ಸಂಭವಿಸಿದ ಭೀಕರ ಅಪಘಾತದಲ್ಲಿ 29 ಮಂದಿ ಸಾವಿಗೀಡಾಗಿದ್ದಾರೆ. 10 ಕ್ಕೂ ಹೆಚ್ಚು ಮಂದಿ  ಗಂಭೀರವಾಗಿ ಗಾಯಗೊಂಡಿದ್ದಾರೆ. 

ಉತ್ತರ ಪ್ರದೇಶ ಸಾರಿಗೆ ಸಂಸ್ಥೆಗೆ ಸೇರಿದ ಬಸ್ 40 ಅಡಿಯ ಕಂದಕಕ್ಕೆ ಉರುಳಿ ಬಿದ್ದಿದೆ. ಚಾಲಕ ನಿದ್ದೆಯಲ್ಲಿ ಬಸ್ ಚಾಲನೆ ಮಾಡಿದ್ದು ಈ ದುರ್ಘಟನೆಗೆ ಕಾರಣವಾಗಿದೆ. 

ಉತ್ತರ ಪ್ರದೇಶದಲ್ಲಿ ಲಕ್ನೋಗೆ ತೆರಳುತ್ತಿದ್ದ ವೇಳೆ ಮುಂಜಾನೆ 4 .30ರ ಸುಮಾರಿಗೆ  ಬಸ್ ಡಿವೈಡರ್ ಗೆ ಡಿಕ್ಕಿಯಾಗಿ ಸೇತುವೆಯಿಂದ ಕೆಳಕ್ಕೆ ಉರುಳಿ ಬಿದ್ದಿದೆ. ಮುಂಜಾನೆಯ ಸವಿ ನಿದ್ದೆಯಲ್ಲಿ ಇದ್ದವರಿಗೆ ಮಾರ್ಗಮಧ್ಯ ಕಾದಿದ್ದ ಸಾವು ಅಪಘಾತ ರೂಪದಲ್ಲಿ ಅಪ್ಪಳಿಸಿದೆ.

ಘಟನೆ ಬಗ್ಗೆ ಉತ್ತರ ಪ್ರದೇಶ ಸಿಎಂ ಸಂತಾಪ ಸೂಚಿಸಿದ್ದು, ಮೃತರ ಕಟುಂಬಕ್ಕೆ 5 ಲಕ್ಷ ರು. ಪರಿಹಾರ ಘೋಷಣೆ ಮಾಡಿದ್ದಾರೆ. 
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಚಾಮರಾಜನಗರದಲ್ಲಿ ಬೇಟೆಗಾರರ ಬಂದೂಕಿನ ಸದ್ದು: ಚಿರತೆ, ನವಿಲು, ಕಾಡುಹಂದಿಗಳೇ ಟಾರ್ಗೆಟ್!
ಬೊಂಡಿ ಬೀಚ್ ಗುಂಡಿನ ದಾಳಿಯಲ್ಲಿ ಪ್ರಾಣಾಪಾಯದಿಂದ ಪಾರಾದ ಕ್ರಿಕೆಟಿಗ ವಾನ್, ಭಯಾನಕ ಘಟನೆ