ಬಸ್ ಪ್ರಯಾಣ ದರ ಏರಿಕೆ ; ಸೆ. 16 ರಿಂದಲೇ ಜಾರಿ

Published : Sep 11, 2018, 07:54 AM ISTUpdated : Sep 19, 2018, 09:22 AM IST
ಬಸ್ ಪ್ರಯಾಣ ದರ ಏರಿಕೆ ; ಸೆ. 16 ರಿಂದಲೇ ಜಾರಿ

ಸಾರಾಂಶ

ಸೆ.16 ರ ನಂತರ ಬಸ್ ಪ್ರಯಾಣ ದರ ಹೆಚ್ಚಳ | ಶೇ.18 ಏರಿಕೆಗೆ ಸಿಎಂ ಒಪ್ಪುವುದು ಕಷ್ಟ |ದರ ಏರಿಕೆ ನಿರ್ಧಾರ ಕೈ ಬಿಡಲ್ಲ: ತಮ್ಮಣ್ಣ  

ಬೆಂಗಳೂರು (ಸೆ. 11): ಗಣೇಶ ಚತುರ್ಥಿಯ ನಂತರ ಬಸ್ ಪ್ರಯಾಣ ದರ ಏರಿಕೆ ಬಹುತೇಕ ನಿಶ್ಚಿತವಾಗಿದ್ದು, ಎಷ್ಟು ಪ್ರಮಾಣದಲ್ಲಿ ಏರಿಕೆಯಾಗಲಿದೆ ಎಂಬುದು ನಿರ್ಧಾರವಾಗಬೇಕಾಗಿದೆ.

ಸಾರಿಗೆ ಸಂಸ್ಥೆಗಳ ನಷ್ಟದ ಹಿನ್ನೆಲೆಯಲ್ಲಿ ಸಚಿವ ಡಿ.ಸಿ.ತಮ್ಮಣ್ಣ ಅವರು ಶೇ.18 ರಷ್ಟು ಹೆಚ್ಚಿಸಬೇಕು ಎಂದು ಪಟ್ಟು ಹಿಡಿದಿದ್ದು, ಮುಖ್ಯಮಂತ್ರಿ ಎಚ್ .ಡಿ.ಕುಮಾರಸ್ವಾಮಿ ಅವರು ಇದಕ್ಕೆ ಒಪ್ಪುವ ಸಾಧ್ಯತೆ ಕಡಿಮೆ ಎನ್ನಲಾಗುತ್ತಿದೆ. ಡೀಸೆಲ್ ಮೇಲಿನ ತೆರಿಗೆ ಇಳಿಕೆ ಮಾಡಲು ರಾಜ್ಯ ಸರ್ಕಾರ ನಿರ್ಧಾರ ಮಾಡಿರುವುದರಿಂದ ಪ್ರಯಾಣ ದರ ಶೇ.18 ರಷ್ಟು ಹೆಚ್ಚಳಕ್ಕೆ ಒಪ್ಪಿಗೆ ನೀಡುವುದು ಅನುಮಾನ ಎಂದು ಸರ್ಕಾರದ ಉನ್ನತ ಮೂಲಗಳು ತಿಳಿಸಿವೆ. 

ಈ ನಡುವೆ, ಬಸ್ ಪ್ರಯಾಣ ದರ ಏರಿಸುವ ನಿರ್ಧಾರದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ. ದಿನೇ ದಿನೇ ಪೆಟ್ರೋಲ್, ಡೀಸೆಲ್ ದರವನ್ನು ಪೈಸೆ ಲೆಕ್ಕದಲ್ಲಿ ಹೆಚ್ಚಿಸಲಾಗಿದೆ. ಹೀಗಾಗಿ ಬಸ್ ಪ್ರಯಾಣ ದರ ಏರಿಕೆ ಅನಿವಾರ್ಯ ಎಂದು ಸಾರಿಗೆ ಸಚಿವ ಡಿ.ಸಿ.ತಮ್ಮಣ್ಣ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡೀಸೆಲ್ ದರ ಏರಿಕೆಯಿಂದ ಮೂರು ತಿಂಗಳ ಅವಧಿಯಲ್ಲಿ ಸಾಕಷ್ಟು ಪ್ರಮಾಣದಲ್ಲಿ ನಷ್ಟವಾಗಿದೆ. ಶೇ.18 ರಷ್ಟು ಬಸ್ ಟಿಕೆಟ್ ದರ ಹೆಚ್ಚಿಸುವ ನಿರ್ಧಾರದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ. ಆದರೂ ಮುಖ್ಯಮಂತ್ರಿಗಳ ಜೊತೆ ಚರ್ಚಿಸಲಾಗುವುದು. ಸೆ.16 ರ ನಂತರ ಹೊಸ ದರ ಜಾರಿಗೆ ಬರಲಿದೆ ಎಂದು ತಿಳಿಸಿದರು.

ನಾವು ಡೀಸೆಲ್ ದರ ಏರಿಕೆಯಿಂದ ರೋಸಿ ಹೋಗಿದ್ದೇವೆ. ನಷ್ಟ ಸರಿದೂಗಿಸಲು ಸಾಧ್ಯವೇ ಆಗುತ್ತಿಲ್ಲ ಎನ್ನುವ ಸ್ಥಿತಿ ಇದೆ. ಹೀಗಾಗಿ ಅನಿವಾರ್ಯವಾಗಿ ಬಸ್ ಪ್ರಯಾಣ ದರ ಏರಿಕೆ ಮಾಡುತ್ತಿದ್ದೇವೆ. ಈ ಸತ್ಯ ಸಂಗತಿ ಜನರಿಗೂ ಗೊತ್ತಿದೆ. ಒಂದು ವರ್ಷದ ಅವಧಿಯಲ್ಲಿ ಅನೇಕ ಬಂದ್ಗಳು ನಾನಾ ಕಾರಣಕ್ಕೆ ನಡೆಯುತ್ತವೆ.

ಆಗ ಸಾರಿಗೆ ಇಲಾಖೆಗೆ ನೂರಾರು ಕೋಟಿ ನಷ್ಟ ಆಗುತ್ತದೆ. ಒಂದು ದಿನ ಬಂದ್ ನಡೆದರೆ ಸಾರಿಗೆ ಇಲಾಖೆಗೆ ₹ 15ರಿಂದ 16 ಕೋಟಿ ರು. ನಷ್ಟವಾಗುತ್ತದೆ. ಈಗ ಒಳ್ಳೆಯ ಉದ್ದೇಶದಿಂದ ಬಂದ್ ಮಾಡಲಾಗಿದೆ. ಆದರೆ, ಸೋಮವಾರ ಒಂದೇ ದಿನ ಸಂಸ್ಥೆಗೆ ₹16 ಕೋಟಿ ನಷ್ಟ ಸಂಭವಿಸಿದೆ ಎಂದು ತಿಳಿಸಿದರು.

ಬಸ್ ದರ ಶೇ.18 ಏರಿಕೆಯಾದರೆ ಎಷ್ಟಾಗಬಹುದು ಹೆಚ್ಚಳ? ಇಲ್ಲಿದೆ ವರದಿ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

‘ಕನ್ನಡಪ್ರಭ’ ಡ್ರಗ್ಸ್‌ ಅಭಿಯಾನ ವಿಧಾನಪರಿಷತ್ತಲ್ಲಿ ಪ್ರತಿಧ್ವನಿ
ಇಂದು 20,000 ರೈತರ ಜತೆ ಬಿಜೆಪಿ ಸುವರ್ಣಸೌಧ ಮುತ್ತಿಗೆ