
ಬೆಂಗಳೂರು : ಬೆಂಗಳೂರಿನಲ್ಲಿ ಉದ್ಯಮಿಯೋರ್ವ ಅಳಿಯ ಹಾಗೂ ಪ್ರೇಯಸಿಯ ಜೊತೆ ಸೇರಿ ತನ್ನ 2ನೇ ಹೆಂಡತಿಯ ಹತ್ಯೆಗೆ ಸುಪಾರಿ ನೀಡಿರುವ ಪ್ರಕರಣವೊಂದು ಬೆಳಕಿಗೆ ಬಂದಿದೆ.
ತುಲೀಪ್ಸ್ ರೆಸಾರ್ಟ್ ಹಾಗೂ ಆಸ್ಟಿನ್ ಕಾಲೇಜು ಮಾಲಿಕ ಶ್ರೀಕುಮಾರ್ ಎಂಬಾತನಿಂದ ಕೃತ್ಯ ನಡೆದಿದೆ. ಈತನ ಪ್ರೇಯಸಿ ಉಷಾ ರೆಡ್ಡಿ ಹಾಗೂ ಅಳಿಯ ನವೀನ್ ಎಂಬಾತನ ಜೊತೆ ಸೇರಿ ತನ್ನ 2ನೇ ಪತ್ನಿ ಹಾಗೂ ಆಕೆಯ ಮಗಳನ್ನು ಹತ್ಯೆ ಮಾಡಲು ಸಂಚು ರೂಪಿಸಿದ್ದ ನೆನ್ನಲಾಗಿದೆ.
ಇನ್ನು ಶ್ರೀಕುಮಾರ್ ಈ ಹಿಂದೆ ತನ್ನ ಸ್ವಂತ ಮಗಳ ಮೇಲೆ ಅತ್ಯಾಚಾರ ಎಸಗಲು ಯತ್ನಿಸಿ ಜೈಲು ಸೇರಿದ್ದನೆನ್ನಲಾಗಿದೆ. ಸದ್ಯ ಸಂಬಂಧ ಕೋಣನಕುಂಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ನಾಪತ್ತೆಯಾಗಿರುವ ಉದ್ಯಮಿಯ ಪತ್ತೆಗಾಗಿ ಪೊಲೀಸರು ಶೋಧ ನಡೆಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.