ಸ್ವದೇಶಿ ಔಷಧಗಳ ಬಳಕೆಗೆ ಮೋಹನ್ ಭಾಗ್ವತ್ ಕರೆ

Published : Oct 26, 2018, 12:02 PM IST
ಸ್ವದೇಶಿ ಔಷಧಗಳ ಬಳಕೆಗೆ ಮೋಹನ್ ಭಾಗ್ವತ್ ಕರೆ

ಸಾರಾಂಶ

ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಮುಖ್ಯಸ್ಥರಾದ ಮೋಹನ್ ಭಾಗ್ವತ್ ಸ್ವದೇಶಿ ಔಷಧಗಳನ್ನು ಬಳಕೆ ಮಾಡಬೇಕು ಎಂದು ಕರೆ ನೀಡಿದ್ದಾರೆ. 

ಕೊಲ್ಲಾಪುರ್ : ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಮುಖ್ಯಸ್ಥರಾದ ಮೋಹನ್ ಭಾಗ್ವತ್ ಅವರು ಬೇರೆ ದೇಶಗಳಲ್ಲಿ ತಯಾರಾದ ಔಷಧಗಳನ್ನು ಕೊಳ್ಳುವುದನ್ನು ನಿಲ್ಲಿಸಿ, ಸ್ವದೇಶಗಳಲ್ಲಿ ತಯಾರಾಗುವ ಔಷಧಗಳನ್ನು ಕೊಳ್ಳಬೇಕೆಂದು  ಕರೆ ನೀಡಿದ್ದಾರೆ.  

ಮಹಾರಾಷ್ಟ್ರದ ಸಿದ್ದಾರ್ಥ್ ಆಸ್ಪತ್ರೆಯ ಸಂಶೋಧನಾ ಕೇಂದ್ರವನ್ನು ಉದ್ಘಾಟಿಸಿ ಮಾತನಾಡಿದ ಅವರು ಈ ವಿಚಾರ ತಿಳಿಸಿದ್ದಾರೆ. ಇಂದು ಜನರಿಗೆ ಆರೋಗ್ಯ ಮತ್ತು ಶಿಕ್ಷಣವು ಆಹಾರದಷ್ಟೇ ಅಗತ್ಯವಾದುದಾಗಿದೆ ಎಂದೂ ಕೂಡ ಅವರು ಹೇಳಿದ್ದಾರೆ. 

ಗ್ರಾಮೀಣ ಪ್ರದೇಶದಲ್ಲಿ ಜನರಿಗೆ ಸೂಕ್ತ ಆರೋಗ್ಯ ಸೌಲಭ್ಯಗಳು ದೊರೆಯುತ್ತಿಲ್ಲ.  ಗ್ರಾಮೀಣ ಪ್ರದೇಶಗಳಲ್ಲಿ ವೈದ್ಯಕೀಯ ಸೌಲಭ್ಯಗಳೂ  ಸಿಗದೇ ಜನರು ಸಮಸ್ಯೆ ಎದುರಿಸುತ್ತಿದ್ದಾರೆ.  ನಗರಗಳಲ್ಲಿ ಶಿಕ್ಷಣ ಪೂರೈಸಿದ ವೈದ್ಯರು ಗ್ರಾಮೀಣ ಪ್ರದೇಶದಲ್ಲಿ ಸೇವೆ ಸಲ್ಲಿಸಲು ನಿರಾಕರಿಸುತ್ತಿದ್ದಾರೆ ಎಂದು ಅವರು ಹೇಳಿದ್ದಾರೆ.

ಹಲವು ರೀತಿಯ ವೈದ್ಯಕೀಯ ಸೌಲಭ್ಯ ಹಾಗೂ  ಡಯಾಗ್ನೋಸಿಸ್ ಸೌಲಭ್ಯಗಳು ದೊರೆಯುತ್ತಿಲ್ಲ. ಆದರೆ ಎಲ್ಲಾ ರೀತಿಯ ಆರೋಗ್ಯ ಸೌಲಭ್ಯಗಳೂ ಕೂಡ ಒಂದೇ ಸೂರಿನಡಿಯಲ್ಲಿ ಗ್ರಾಮೀಣ ಪ್ರದೇಶದ ಜನರಿಗೆ ಆರೋಗ್ಯ ಸೌಲಭ್ಯ ಸಿಗುವಂತಾಗಬೇಕು ಎಂದು ಹೇಳಿದರು. ಸ್ವದೇಶಿ ಔಷಧಗಳ ಬಳಕೆಯಿಂದ ಆರೋಗ್ಯ ಕಾಪಾಡಿಕೊಳ್ಳಲು ಕರೆ ನೀಡಿದ್ದಾರೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ನಟ ರಿಷಬ್ ಶೆಟ್ಟಿ ಹರಕೆ ಕೋಲ ವಿವಾದ, ದೈವದ ಕಟ್ಟುಕಟ್ಟಳೆಯಲ್ಲಿ ಲೋಪವಾಗಿಲ್ಲ: ವಾರಾಹಿ ದೈವಸ್ಥಾನ ಸಮಿತಿ ಸ್ಪಷ್ಟನೆ
ಫೇಸ್‌ಬುಕ್ ಚಿಟ್ಟೆಯ ಮುಖ ನೋಡಿ ಹನಿಹೀರಲು ಬಂದವನೇ ಟ್ರ್ಯಾಪ್ , ಯುವಕನ ಮೇಲೆ ಹಲ್ಲೆ, ಹಣಕ್ಕೆ ಬೇಡಿಕೆ ಇಟ್ಟವರು ಎಸ್ಕೇಪ್!