
ಬೆಂಗಳೂರು (ಸೆ. 24): ಉಪ ಚುನಾವಣೆ ನಡೆಯಲಿರುವ 15 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರು ಅಖೈರುಗೊಳಿಸಲು ಪ್ರಾಥಮಿಕ ಹಂತದ ಪರಿಶೀಲನೆ ಕಾರ್ಯವನ್ನು ಕಾಂಗ್ರೆಸ್ ಮುಖಂಡರು ಸೋಮವಾರ ನಡೆಸಿದರು.
ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹಾಗೂ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ಸೋಮವಾರ ಸಭೆ ನಡೆಸಿದ ಕಾಂಗ್ರೆಸ್ ನಾಯಕರು, ಈ ಎಲ್ಲಾ 15 ಕ್ಷೇತ್ರಗಳಲ್ಲಿ ಗೆಲ್ಲಬಲ್ಲ ಅಭ್ಯರ್ಥಿಗಳ ಬಗ್ಗೆ ಪಕ್ಷದ ವೀಕ್ಷಕರು ನೀಡಿದ ವರದಿಯ ಪರಾಮರ್ಶೆಯನ್ನು ನಡೆಸಿದರು.
ಈ ಸಭೆಯಲ್ಲಿ ಪ್ರತಿ ಕ್ಷೇತ್ರಕ್ಕೆ ನಾಲ್ಕು ಹೆಸರುಗಳನ್ನು ಆಯ್ಕೆ ಮಾಡಲಾಗಿದ್ದು, ಈ ಪಟ್ಟಿಯನ್ನು ಸೆ.25 ರಂದು ನಗರದ ಕೆಪಿಸಿಸಿ ಕಚೇರಿಯಲ್ಲಿ ನಡೆಯಲಿರುವ ಕಾಂಗ್ರೆಸ್ ಚುನಾವಣಾ ಸಮಿತಿಯ ಮುಂದಿಡಲಿದ್ದಾರೆ. ಬಹುತೇಕ ಚುನಾವಣಾ ಸಮಿತಿ ಸಭೆಯಲ್ಲಿ ಸಂಭಾವ್ಯರ ಪಟ್ಟಿ ಅಖೈರುಗೊಳ್ಳಲಿದೆ. ಅನಂತರ ಸದರಿ ಪಟ್ಟಿಯನ್ನು ಒಪ್ಪಿಗೆಗಾಗಿ ಹೈಕಮಾಂಡ್ಗೆ ರವಾನಿಸುವ ಸಾಧ್ಯತೆಯಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
ಸೋಮವಾರ ನಡೆದ ಸಭೆಯಲ್ಲಿ ಮಾಜಿ ಉಪ ಮುಖ್ಯಮಂತ್ರಿ ಡಾ ಜಿ.ಪರಮೇಶ್ವರ್, ಮಾಜಿ ಸಚಿವರಾದ ರಾಮಲಿಂಗಾರೆಡ್ಡಿ, ಟಿ.ಬಿ.ಜಯಚಂದ್ರ, ಆರ್.ವಿ.ಸುದರ್ಶನ್ ಸೇರಿದಂತೆ ಪ್ರಮುಖ ನಾಯಕರು ಪಾಲ್ಗೊಂಡಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.