ನಾಳೆಯಿಂದ ಇನ್ನಷ್ಟು ತೀವ್ರಗೊಳ್ಳಲಿದೆ ವೈದ್ಯರ ಮುಷ್ಕರ

Published : Nov 15, 2017, 05:00 PM ISTUpdated : Apr 11, 2018, 12:51 PM IST
ನಾಳೆಯಿಂದ ಇನ್ನಷ್ಟು ತೀವ್ರಗೊಳ್ಳಲಿದೆ ವೈದ್ಯರ ಮುಷ್ಕರ

ಸಾರಾಂಶ

ವೈದ್ಯರ ಮುಷ್ಕರದಿಂದಾಗಿ ರಾಜ್ಯದಲ್ಲಿ 13 ಮಂದಿ ಮೃತಪಟ್ಟಿದ್ದರೂ ವೈದ್ಯರು ತಮ್ಮ ಹಠವನ್ನು ಬಿಡದೇ ತಮ್ಮ ಪ್ರತಿಭಟನೆಯನ್ನು ಮುಂದುವರೆಸುತ್ತಿದ್ದಾರೆ. ಮುಷ್ಕರ 3 ನೇ ದಿನಕ್ಕೆ ಕಾಲಿಟ್ಟಿದೆ.  

ಬೆಂಗಳೂರು (ನ.15): ವೈದ್ಯರ ಮುಷ್ಕರದಿಂದಾಗಿ ರಾಜ್ಯದಲ್ಲಿ 13 ಮಂದಿ ಮೃತಪಟ್ಟಿದ್ದರೂ ವೈದ್ಯರು ತಮ್ಮ ಹಠವನ್ನು ಬಿಡದೇ ತಮ್ಮ ಪ್ರತಿಭಟನೆಯನ್ನು ಮುಂದುವರೆಸುತ್ತಿದ್ದಾರೆ. ಮುಷ್ಕರ 3 ನೇ ದಿನಕ್ಕೆ ಕಾಲಿಟ್ಟಿದೆ.  

ನಾಳೆಯಿಂದ ಖಾಸಗಿ ವೈದ್ಯರ ಮುಷ್ಕರ ಇನ್ನಷ್ಟು ತೀವ್ರವಾಗಲಿದೆ. ಬೆಂಗಳೂರಿನ ಮಲ್ಟಿ ಸ್ಪೆಷಲ್ ಆಸ್ಪತ್ರೆಗಳು ನಾಳೆ ಸಂಪೂರ್ಣ ಬಂದ್ ಆಗಲಿವೆ.  ಖಾಸಗಿ ಆಸ್ಪತ್ರೆಗಳಲ್ಲಿ ಹೊರರೋಗಿಗಳ ವಿಭಾಗ ಸ್ಥಗಿತಗೊಳ್ಳಲಿದೆ.

ತುರ್ತು ಒಪಿಡಿ ಹೊರತುಪಡಿಸಿ ಎಲ್ಲ ಘಟಕಗಳ ಸ್ಥಗಿತಕ್ಕೆ ತೀರ್ಮಾನ ತೆಗೆದುಕೊಳ್ಳಲಾಗಿದೆ.  ಬೆಳಗಾವಿಯಲ್ಲಿ ನಡೆಯುತ್ತಿರುವ ವೈದ್ಯರ ಮುಷ್ಕರಕ್ಕೆ ಐಎಂಎ, ಪಾನಾ ಸೇರಿದಂತೆ ಖಾಸಗಿ ಆಸ್ಪತ್ರೆಗಳ 5 ಸಂಘಗಳು ಬೆಂಬಲ ವ್ಯಕ್ತಪಡಿಸಿವೆ.

ನಾಳೆ ಬೆಳಗ್ಗೆ 8 ಗಂಟೆಯಿಂದ ಬೆಂಗಳೂರಿನಲ್ಲಿ ಪ್ರತಿಭಟನೆಗೆ ನಿರ್ಧಾರ ತೆಗೆದುಕೊಳ್ಳಲಾಗಿದೆ.  ವಿಧೇಯಕ ವಾಪಸ್ ಪಡೆಯುವವರೆಗೂ ಪ್ರತಿಭಟನೆ ಮುಂದುವರಿಯಲಿದೆ. ರಾಜ್ಯದಲ್ಲಿ ರೋಗಿಗಳ ಸಾವಿಗೆ ಸರ್ಕಾರವೇ ನೇರ ಹೊಣೆ.  ಸರ್ಕಾರ ಹಠಮಾರಿ ಧೋರಣೆ ಅನುಸರಿಸುತ್ತಿದೆ ಎಂದು  ಪಾನಾ ಚುನಾಯಿತ ಅಧ್ಯಕ್ಷ ಡಾ.ಜಯಣ್ಣ ಆರೋಪಿಸಿದ್ದಾರೆ.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಅಂಧರ ವಿಶ್ವಕಪ್ ಹೀರೋಯಿನ್ಸ್‌ಗಳಿಗೆ ದೊಡ್ಮನೆಯಿಂದ ಗೌರವ: ರಾಜ್ ಕುಟುಂಬದ ಆತಿಥ್ಯಕ್ಕೆ ಮೈಮರೆತ ಚಾಂಪಿಯನ್ನರು!
Vastu Shastra: ನೆನಪಿಡಿ, ಅದೃಷ್ಟ ಕೈಹಿಡಿಯಲು ದೇವಸ್ಥಾನಕ್ಕೆ ಈ ಮೂರು ವಸ್ತುಗಳನ್ನ ಗುಟ್ಟಾಗಿ ದಾನ ಮಾಡ್ಬೇಕು!