
ಮೈಸೂರು (ಮಾ.19): ಸರ್ಕಾರ ಹಾಗೂ ಬಿಜೆಪಿ ನಡುವಿನ ಜಿದ್ದಾಜಿದ್ದಿಗೆ ಕಾರಣವಾಗಿರುವ ನಂಜನಗೂಡು ಹಾಗೂ ಗುಂಡ್ಲುಪೇಟೆ ಉಪಚುನಾವಣೆಯು ನಿಧಾನವಾಗಿ ಕಾವು ಪಡೆದುಕೊಂಡಿದೆ.
ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ನಡುವೆ ನೇರ ಸ್ಪರ್ಧೆ ಏರ್ಪಟ್ಟಿದ್ದು, ನಾಳೆ ಎರಡೂ ಕ್ಷೇತ್ರಗಳಲ್ಲೂ ಎರಡೂ ಪಕ್ಷದ ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆ ಮಾಡುತ್ತಿದ್ದಾರೆ.
ಈ ಮೂಲಕ ಅಧಿಕೃತವಾಗಿ ಎರಡೂ ಪಕ್ಷಗಳು ಮತಬೇಟೆಗೆ ಬೀದಿಗೆ ಇಳಿಯಲಿವೆ. ಮೀಸಲು ಕ್ಷೇತ್ರ ನಂಜನಗೂಡಿನ ಕಾಂಗ್ರೆಸ್ ಅಭ್ಯರ್ಥಿ ಕಳಲೆ ಕೇಶವಮೂರ್ತಿ ಬೆಳಿಗ್ಗೆ 10.30 ರ ಸುಮಾರಿಗೆ ನಾಮಪತ್ರ ಸಲ್ಲಿಕೆ ಮಾಡಲಿದ್ದು, ಬಿಜೆಪಿ ಅಭ್ಯರ್ಥಿ ವಿ.ಶ್ರೀನಿವಾಸ್ ಪ್ರಸಾದ್ 11.30ಕ್ಕೆ ಉಮೇದುವಾರಿಕೆ ಸಲ್ಲಿಸಲಿದ್ದಾರೆ.
ಅದೇ ರೀತಿ ಸಾಮಾನ್ಯ ಕ್ಷೇತ್ರ ಗುಂಡ್ಲುಪೇಟೆಯಲ್ಲಿ ಕೂಡ ಬಿಜೆಪಿಯ ನಿರಂಜನ್ ಕುಮಾರ್ ಹಾಗೂ ಕಾಂಗ್ರೆಸ್'ನಿಂದ ದಿವಂಗತ ಡಾ.ಹೆಚ್.ಎಸ್.ಮಹದೇವ್ ಪ್ರಸಾದ್ ಪತ್ನಿ ಗೀತಾ ಪ್ರಸಾದ್ ನಾಮಪತ್ರ ಸಲ್ಲಿಸಲಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.