
ಬೆಂಗಳೂರು : ವಿಧಾನಪರಿಷತ್ ಸದಸ್ಯ ಬೈರತಿ ಸುರೇಶ್ ಅವರು ತಮ್ಮ ಸದಸ್ಯತ್ವಕ್ಕೆ ನೀಡಿದ ರಾಜೀನಾಮೆಯನ್ನು ವಿಧಾನ ಪರಿಷತ್ ಸಭಾಪತಿ ಡಿ.ಎಚ್. ಶಂಕರಮೂರ್ತಿ ಅಂಗೀಕರಿಸಿದ್ದಾರೆ.
ಸೋಮವಾರ ಸುದ್ದಿಗಾರರಿಗೆ ಈ ವಿಷಯ ತಿಳಿಸಿದ ಸಭಾಪತಿಗಳು, ಬೈರತಿ ಸುರೇಶ್ ಭಾನುವಾರ ತಮ್ಮ ನಿವಾಸಕ್ಕೆ ಆಗಮಿಸಿ ಪರಿಷತ್ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ರಾಜೀನಾಮೆ ಪತ್ರ ಕ್ರಮಬದ್ಧವಾಗಿರುವುದರಿಂದ ಅಂಗೀಕರಿಸಲಾಗಿದೆ. ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ಉದ್ದೇಶದಿಂದ ಪರಿಷತ್ ಸದಸ್ಯತ್ವಕ್ಕೆ ರಾಜೀನಾಮೆ ನೀಡಿರಬಹುದೆಂದು ಅವರು ತಿಳಿಸಿದರು.
ಹೆಬ್ಬಾಳದಿಂದ ಕಣಕ್ಕೆ: ಬೈರತಿ ಸುರೇಶ್ ಅವರು ಹೆಬ್ಬಾಳ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸುವುದು ಬಹುತೇಕ ಖಚಿತವಾಗಿದೆ. ಈ ಹಿನ್ನೆಲೆಯಲ್ಲಿ ಮೇಲ್ಮನೆ ಸದಸ್ಯತ್ವಕ್ಕೆ ಅವರು ರಾಜೀನಾಮೆ ನೀಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.