
ಬಳ್ಳಾರಿ: 'ನಾಯಿ ಹಸಿದಿತ್ತು. ಅನ್ನ ಹಳಸಿತ್ತು. ಇದು ಹಳಸಿದ ಹಸಿದ ಸರಕಾರ. ತಾಂತ್ರಿಕವಾಗಿ ಅಧಿಕಾರದಲ್ಲಿದೆ. ಆದರೆ, ನೈತಿಕವಾಗಿ ಸರ್ಕಾರ ನಡೆಸಲು ಉಭಯ ಪಕ್ಷಗಳಿಗೂ ಯೋಗ್ಯತೆ ಇಲ್ಲ,' ಎಂದು ಸಿ.ಟಿ.ರವಿ ವ್ಯಂಗ್ಯವಾಡಿದ್ದಾರೆ.
'ಲಿವ್ ಇನ್ ಟುಗೆದರ್ ಸರಕಾರವಿದು. ಅರೆಂಜ್ಡ್ ಮ್ಯಾರೇಜೇ ಹೆಚ್ಚು ದಿನ ಉಳಿಯದ ಈ ಕಾಲದಲ್ಲಿ ಸಹ ಜೀವನ ಉಳಿಯುತ್ತಾ? ಸಚಿವ ಸಂಪುಟ ರಚನೆ ವೇಳೆ ಸರಕಾರ ಬೀಳಲಿದೆ,' ಎಂದು ಭವಿಷ್ಯ ನುಡಿದರು.
ವಿಧಾನ ಪರಿಷತ್ ಚುನಾವಣೆಯಲ್ಲಿ ಈಶಾನ್ಯ ಪದವೀಧರರ ಕ್ಷೇತ್ರದ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಕೆ.ಬಿ.ಶ್ರೀನಿವಾಸ್ ಪರ ಪ್ರಚಾರ ನಡೆಸುತ್ತಿರುವ ಚಿಕ್ಕಮಗಳೂರು ಶಾಸಕ ರವಿ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, 'ಬಳ್ಳಾರಿ, ಬೀದರ್, ಬೆಳಗಾವಿ ಹಾಗೂ ಬೀಜಾಪುರ ಜಿಲ್ಲೆಗಳಲ್ಲಿ ಬಿಜೆಪಿ ಕಳಪೆ ಪ್ರದರ್ಶನ ತೋರಿದ್ದರಿಂದ ಸರಕಾರ ರಚಿಸುವಲ್ಲಿ ಹಿನ್ನೆಡೆಯಾಯಿತು,' ಎಂದು ಬೇಸರ ವ್ಯಕ್ತಪಡಿಸಿದರು.
'ಕೇಂದ್ರ ಸರಕಾರದ ನಾಲ್ಕು ವರ್ಷಗಳ ಸಾಧನೆ ಬಗ್ಗೆ ತೃಪ್ತಿ ಇದೆ. ಮೋದಿ ಜನರಿಗೆ ಹತ್ತಿರವಾಗಿ, ಪ್ರಧಾನ ಸೇವಕರಂತೆ ಕಾರ್ಯ ನಿರ್ವಹಿಸುತ್ತಿದ್ದಾರೆ,' ಎಂದು ಜಿಎಸ್ಟಿ ಹಾಗೂ ನೋಟು ಅಮಾನ್ಯಕರಣದ ಬಗ್ಗೆ ತೃಪ್ತಿ ವ್ಯಕ್ತಪಡಿಸಿದರು.
"
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.