
ಬೆಂಗಳೂರು (ಜೂ. 06): ಪೊಲೀಸರ ಸಮಯ ಪ್ರಜ್ಞೆ ಯಿಂದ ಭಾರೀ ಅನಾಹುತವೊಂದು ತಪ್ಪಿದೆ. ಕೂದಲೆಳೆ ಅಂತರದಿಂದ ಆರು ಮಂದಿ ಪೇದೆಗಳು ಪಾರಾಗಿದ್ದಾರೆ. ನಿನ್ನೆ ರಾತ್ರಿ 10:50 ರ ಸುಮಾರಿಗೆ ಎಲಿವೇಟೆಡ್ ರಸ್ತೆ ಸಂಚಾರ ನಿರ್ಬಂಧಿಸಿ ಟ್ರಾಫಿಕ್ ನಿಯಂತ್ರಣ ವೇಳೆ ಈ ಘಟನೆ ನಡೆದಿದೆ.
ವೇಗವಾಗಿ ಬಂದ ಕ್ಯಾಬ್, ಚಾಲಕನ ನಿಯಂತ್ರಣ ತಪ್ಪಿ ಏಕಾಏಕಿ ಬ್ಯಾರಿಕೇಡ್ ಡಿಕ್ಕಿ ಹೊಡೆದಿದೆ. ಬ್ಯಾರಿಕೇಡ್ ಮುಂಭಾಗ ನಿಂತಿದ್ದ ಪೊಲೀಸರು ಪಕ್ಕಕ್ಕೆ ಜಿಗಿದು ಪಾರಾಗಿದ್ದಾರೆ. ಯಲಹಂಕ ಎರ್ ಫೋರ್ಸ್ ಮುಂಭಾಗ ಟ್ರಾಫಿಕ್ ನಿಯಂತ್ರಿಸುವಾಗ ಈ ಘಟನೆ ನಡೆದಿದೆ. ಪೇದೆಗಳ ಸಮಯ ಪ್ರಜ್ಞೆಯಿಂದ ಭಾರೀ ಅನಾಹುತ ತಪ್ಪಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.