ಅಧಿವೇಶನ ಬಳಿಕ ಸಂಪುಟ ವಿಸ್ತರಣೆ

Published : Jun 02, 2017, 12:28 PM ISTUpdated : Apr 11, 2018, 01:00 PM IST
ಅಧಿವೇಶನ ಬಳಿಕ ಸಂಪುಟ ವಿಸ್ತರಣೆ

ಸಾರಾಂಶ

ಪರಮೇಶ್ವರ್‌ ರಾಜಿನಾಮೆಯಿಂದ ತೆರವಾಗಿರುವ ಗೃಹ ಸಚಿವ ಸ್ಥಾನಕ್ಕೆ ಯಾರನ್ನು ನೇಮಿಸಬೇಕು ಎಂಬುದನ್ನು ಈಗಲೇ ಹೇಳಲು ಸಾಧ್ಯವಿಲ್ಲ. ಒಟ್ಟು ಮೂರು ಸಚಿವ ಸ್ಥಾನ ಖಾಲಿ ಇದ್ದು, ಅಧಿವೇಶನದ ನಂತರ ಇವು ಭರ್ತಿಯಾಗಲಿವೆ ಎಂದು ಸಿಎಂ ಹೇಳಿದ್ದಾರೆ.

ಮೈಸೂರು: ‘ರಾಜ್ಯ ವಿಧಾನಮಂಡಲ ಅಧಿವೇಶನ ಮುಗಿದ ಬಳಿಕ ಸಚಿವ ಸಂಪುಟ ವಿಸ್ತರಣೆ ಮಾಡಲಾಗುವುದು. ಸಂಪುಟಕ್ಕೆ ಯಾರನ್ನು ಸೇರಿಸಿಕೊಳ್ಳಬೇಕು ಎಂಬುದನ್ನು ನಾನೇ ತೀರ್ಮಾನಿಸುತ್ತೇನೆ' ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ನಗರದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿ, ಪರಮೇಶ್ವರ್‌ ರಾಜಿನಾಮೆಯಿಂದ ತೆರವಾಗಿರುವ ಗೃಹ ಸಚಿವ ಸ್ಥಾನಕ್ಕೆ ಯಾರನ್ನು ನೇಮಿಸಬೇಕು ಎಂಬುದನ್ನು ಈಗಲೇ ಹೇಳಲು ಸಾಧ್ಯವಿಲ್ಲ. ಒಟ್ಟು ಮೂರು ಸಚಿವ ಸ್ಥಾನ ಖಾಲಿ ಇದ್ದು, ಅಧಿವೇಶನದ ನಂತರ ಇವು ಭರ್ತಿಯಾಗಲಿವೆ ಎಂದರು.

‘ಮುಂಬರುವ ವಿಧಾನಸಭಾ ಚುನಾವಣೆ ನನ್ನ ನೇತೃತ್ವದಲ್ಲೇ ನಡೆಯಲಿದ್ದು ಒಬ್ಬರಿಗೆ ಒಂದೇ ಹುದ್ದೆ ಎಂದು ಪಕ್ಷದ ಹೈಕಮಾಂಡ್‌ ಹೇಳಿದೆ. ಹಾಗಾಗಿ ಚುನಾವಣೆಯ ನೇತೃತ್ವ ಮಾತ್ರ ನನ್ನದು, ಮುಖ್ಯಮಂತ್ರಿ ಯಾರಾಗ ಬೇಕೆಂಬುದು ಚುನಾವಣೆ ಬಳಿಕ ಶಾಸಕಾಂಗ ಸಭೆಯಲ್ಲಿ ನಿರ್ಧಾರವಾಗಲಿದೆ' ಎಂದರು.

ರಾಜ್ಯ ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷ ಸ್ಥಾನಕ್ಕೆ ನೇಮಕಗೊಂಡಿರುವ ಸಚಿವ ಡಿ.ಕೆ. ಶಿವಕುಮಾರ್‌ ಅವರಿಗೆ ಯಾವುದೇ ಅಸಮಾಧಾನ ಇಲ್ಲ ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಪ್ರೀತಿಯ ಶ್ವಾನದ ಸಾವಿನ ದುಃಖದಿಂದ ಹೊರಬರಲಾಗದೇ ಸಾವಿಗೆ ಶರಣಾದ ಗಾಯಕಿ
ರಾಹುಲ್ ಗಾಂಧಿಗೆ ಮಾಜಿ ಸಚಿವ ಕೆ.ಎನ್. ರಾಜಣ್ಣ 8 ಪುಟಗಳ ಪತ್ರ; ಮಹಾನಾಯಕನ ಬಣ್ಣ ಬಯಲಿಗೆ ಯತ್ನ!