ಸಿದ್ದುಗೆ ಹೈಪವರ್: ಸಂಪುಟ ವಿಸ್ತರಣೆ ಸಿಎಂ ವಿವೇಚನೆಗೆ

Published : Apr 16, 2017, 04:12 AM ISTUpdated : Apr 11, 2018, 01:13 PM IST
ಸಿದ್ದುಗೆ ಹೈಪವರ್: ಸಂಪುಟ ವಿಸ್ತರಣೆ ಸಿಎಂ ವಿವೇಚನೆಗೆ

ಸಾರಾಂಶ

ಆದರೆ, ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ವಿಚಾರ ಸಾಕಷ್ಟುಸಂಕೀರ್ಣವಾಗಿರುವ ಹಿನ್ನೆಲೆಯಲ್ಲಿ ಈ ಬಗ್ಗೆ ತಕ್ಷಣದ ನಿರ್ಧಾರ ಸಾಧ್ಯವಾಗಿಲ್ಲ. ಈ ಬಗ್ಗೆ ರಾಜ್ಯದ ಇತರ ನಾಯಕರೊಂದಿಗೂ ಸಮಾಲೋಚನೆ ನಡೆಯಬೇಕಿರುವ ಹಿನ್ನೆಲೆಯಲ್ಲಿ ಬದಲಾವಣೆ ವಿಚಾರ ಮುಂದೂಡಿಕೆ ಕಂಡಿದೆ.

ಬೆಂಗಳೂರು(ಏ.16): ಉಪ ಚುನಾವಣೆ ಗೆಲುವಿನ ಹುಮ್ಮಸ್ಸಿನಲ್ಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಹೈ-ಪವರ್‌ ನೀಡಲು ಹೈಕಮಾಂಡ್‌ ಕೂಡ ಮುಂದಾಗಿದೆ. ಆದರೆ, ಇದಕ್ಕೆ ರಾಜ್ಯದ ಇತರ ನಾಯಕರ ಜೊತೆ ಚರ್ಚಿಸಬೇಕು ಎಂಬ ಷರತ್ತು ಕೂಡ ಅನ್ವಯವಾಗಿದೆ!
ಉಪ ಚುನಾವಣೆ ಫಲಿತಾಂಶದ ವಿವರ ನೀಡಲು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್‌, ಕಾರ್ಯಾಧ್ಯಕ್ಷ ದಿನೇಶ್‌ ಗುಂಡೂರಾವ್‌ ಅವರೊಡಗೂಡಿ ರಾಹುಲ್‌ ಗಾಂಧಿ ಹಾಗೂ ಸೋನಿಯಾ ಗಾಂಧಿ ಅವರನ್ನು ಪ್ರತ್ಯೇಕವಾಗಿ ಭೇಟಿ ಮಾಡಿದ ಸಿದ್ದರಾಮಯ್ಯ ಅವರಿಗೆ ವಿಧಾನಪರಿಷತ್ತಿನ 3 ಸದಸ್ಯರ ನಾಮಕರಣ ಹಾಗೂ ಸಚಿವ ಸಂಪುಟದಲ್ಲಿ ಖಾಲಿ ಉಳಿದಿರುವ ಎರಡು ಸ್ಥಾನಗಳ ಭರ್ತಿಗೆ ಸಂಬಂಧಿಸಿದಂತೆ ಪೂರ್ಣ ಫ್ರೀ ಹ್ಯಾಂಡ್‌ ಸಿಕ್ಕಿದೆ.
ಆದರೆ, ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ವಿಚಾರ ಸಾಕಷ್ಟುಸಂಕೀರ್ಣವಾಗಿರುವ ಹಿನ್ನೆಲೆಯಲ್ಲಿ ಈ ಬಗ್ಗೆ ತಕ್ಷಣದ ನಿರ್ಧಾರ ಸಾಧ್ಯವಾಗಿಲ್ಲ. ಈ ಬಗ್ಗೆ ರಾಜ್ಯದ ಇತರ ನಾಯಕರೊಂದಿಗೂ ಸಮಾಲೋಚನೆ ನಡೆಯಬೇಕಿರುವ ಹಿನ್ನೆಲೆಯಲ್ಲಿ ಬದಲಾವಣೆ ವಿಚಾರ ಮುಂದೂಡಿಕೆ ಕಂಡಿದೆ.

ಹೀಗಾಗಿ ಸದ್ಯಕ್ಕೆ ಪರಮೇಶ್ವರ್‌ ಅವರೇ ಕೆಪಿಸಿಸಿ ಅಧ್ಯಕ್ಷರಾಗಿ ಮುಂದುವರೆಯಲಿದ್ದಾರೆ. ವಾಸ್ತವವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಜೆಂಡಾದಲ್ಲಿ ಪ್ರಮುಖವಾಗಿದ್ದ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ವಿಚಾರ ರಾಹುಲ್‌ ಗಾಂಧಿ ಹಾಗೂ ಸೋನಿಯಾ ಗಾಂಧಿ ಅವರ ಸಮ್ಮುಖದಲ್ಲಿ ಚರ್ಚೆಗೆ ಬಂದಿಲ್ಲ. ಬದಲಾಗಿ, ಈ ಭೇಟಿಯ ನಡುವೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯ ಉಸ್ತುವಾರಿ ದಿಗ್ವಿಜಯಸಿಂಗ್‌ ಹಾಗೂ ಸೋನಿಯಾ ಗಾಂಧಿ ಅವರ ರಾಜಕೀಯ ಕಾರ್ಯದರ್ಶಿ ಅಹ್ಮದ್‌ ಪಟೇಲ್‌ ಅವರನ್ನು ಏಕಾಂಗಿಯಾಗಿ ಭೇಟಿ ಮಾಡಿ ಸುಮಾರು ಸಮಯ ಮಾತುಕತೆ ನಡೆಸಿದ್ದು, ಈ ಹಂತದಲ್ಲಿ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಅಗತ್ಯವನ್ನು ಬಲವಾಗಿ ಮಂಡಿಸಿದ್ದಾರೆ.

 ಜತೆಗೆ, ಈ ಹುದ್ದೆಯ ಆಕಾಂಕ್ಷಿಯಾ ಗಿರುವ ಡಿ.ಕೆ.ಶಿವಕುಮಾರ್‌ ಅವರನ್ನು ಪರಿಗಣಿಸುವುದಕ್ಕೆ ವಿರೋಧ ವ್ಯಕ್ತಪಡಿ ಸಿದ್ದಾರೆ ಎಂದು ಹೇಳಲಾಗಿದೆ. ಪರಮೇಶ್ವರ್‌ ಅವರನ್ನು ಬದಲಾ ಯಿಸುವಾಗ ಈ ಹುದ್ದೆಯನ್ನು ದಲಿತರಿಗೆ ನೀಡಬೇಕು, ಅಂದರೆ ಮಹದೇವಪ್ಪ ಅವರನ್ನು ಪರಿಗಣಿಸ ಬೇಕು. ಅದು ಸಾಧ್ಯವಾಗದೆ ಮೇಲ್ವ ರ್ಗಕ್ಕೆ ನೀಡಬೇಕು ಎಂದರೆ ಲಿಂಗಾ ಯತರಿಗೆ ನೀಡಬೇಕು ಎಂದು ಸಿದ್ದರಾಮಯ್ಯ ವಾದಿಸಿದ್ದಾರೆ.

 ಈ ಹಂತದಲ್ಲಿ ಬಹುಕಾಲದಿಂದ ತಮ್ಮ ಬತ್ತಳಿಕೆಯಲ್ಲಿದ್ದ ಎಸ್‌.ಆರ್‌. ಪಾಟೀಲ್‌ ರ ಹೆಸರನ್ನು ಕೈಬಿಟ್ಟು, ಸಂಪನ್ಮೂಲ ಕ್ರೋಡೀಕರಣ ಸಾಮರ್ಥ್ಯ ಹೊಂದಿರುವ ಎಂ.ಬಿ. ಪಾಟೀಲ್‌ ಅವರನ್ನು ಸೂಚಿಸಿದ್ದಾರೆ ಎಂದು ದೆಹಲಿಯ ಮೂಲಗಳು ಹೇಳುತ್ತವೆ. ಆದರೆ, ಈ ವಿಚಾರ ಮಲ್ಲಿಕಾರ್ಜುನ ಖರ್ಗೆ, ವೀರಪ್ಪ ಮೊಯ್ಲಿ, ಆಸ್ಕರ್‌ ಫರ್ನಾಂಡಿಸ್‌ ಅವರ ಸಮ್ಮುಖದಲ್ಲಿ ಚರ್ಚೆಯಾಗಬೇಕಿದೆ. ಈ ಪ್ರಕ್ರಿಯೆ ಸುದೀರ್ಘವಾಗುವ ಸಾಧ್ಯತೆಯಿರುವುದ ರಿಂದ ಸದ್ಯಕ್ಕೆ ಪರಮೇಶ್ವರ್‌ ಮುಂದುವರೆಯಲಿ ಎಂಬ ನಿಲುವಿಗೆ ಬರಲಾಗಿದೆ ಎಂದು ಮೂಲಗಳು ತಿಳಿಸಿವೆ. ಎಂಎಲ್‌ಸಿ ನೇಮಕ ಹಾಗೂ ಸಚಿವ ಸಂಪುಟದಲ್ಲಿನ ಖಾಲಿ ಸ್ಥಾನ ತುಂಬುವ ವಿಚಾರದಲ್ಲಿ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್‌ ಸಂಪೂರ್ಣ ಫ್ರೀ ಹ್ಯಾಂಡ್‌ ನೀಡಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

Breaking ಸ್ಮೋಕ್ ಬಾಂಬ್ ಎಸೆದು ಸಿಕ್ಕ ಸಿಕ್ಕವರಿಗೆ ಚಾಕು ಇರಿದ ದುಷ್ಕರ್ಮಿ, 3 ಸಾವು, ಐವರು ಗಂಭೀರ
ಶಕ್ತಿಯಡಿ ಸರ್ಕಾರದಿಂದ ಸಾರಿಗೆ ನಿಗಮಕ್ಕೆ ₹4000 ಕೋಟಿ ಬಾಕಿ: ಸಚಿವ ರಾಮಲಿಂಗಾರೆಡ್ಡಿ