ಸಿದ್ಧಾರ್ಥ ಅವರ ತಂದೆಗೆ ಗೊತ್ತಿಲ್ಲ ಮಗನ ಸಾವಿನ ಸುದ್ದಿ

Published : Jul 31, 2019, 11:01 AM ISTUpdated : Jul 31, 2019, 04:36 PM IST
ಸಿದ್ಧಾರ್ಥ ಅವರ ತಂದೆಗೆ ಗೊತ್ತಿಲ್ಲ ಮಗನ ಸಾವಿನ ಸುದ್ದಿ

ಸಾರಾಂಶ

ಆತ್ಮಹತ್ಯೆಗೆ ಶರಣಾಗಿರುವ ಸಿದ್ಧಾರ್ಥ್ ಅವರ ತಂದೆ ಗಂಗಯ್ಯ ಹೆಗ್ಡೆ ಅವರು ಮೈಸೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೋಮಾ ಸ್ಥಿತಿಯಲ್ಲಿ ಇರುವ ಅವರಿಗೆ ಮಗನ ಸಾವಿನ ಬಗ್ಗೆ ತಿಳಿದೇ ಇಲ್ಲ. 

ಮೈಸೂರು [ಜು.31]:  ಆತ್ಮಹತ್ಯೆಗೆ ಶರಣಾದ ಉದ್ಯಮಿ ಸಿದ್ಧಾರ್ಥ ಅವರ ತಂದೆ ಕೋಮಾ ಸ್ಥಿತಿಯಲ್ಲಿದ್ದು, ಮೈಸೂರಿನ ಗೋಪಾಲಗೌಡ ಶಾಂತವೇರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆದರೆ ಅವರ ಮಗನ ಸಾವಿನ ಸುದ್ದಿ ಅವರಿಗೆ ತಿಳಿದಿಲ್ಲ. 

"

ವಯೋಸಹಜ ಕಾಯಿಲೆಯಿಂದ ಬಳಲುತ್ತಿರುವ ಸಿದ್ಧಾರ್ಥ ಅವರ ತಂದೆ ಗಂಗಯ್ಯ ಹೆಗ್ಡೆ ಅವರು ಮನೆಯಲ್ಲಿ ಕಾಲು ಜಾರಿ ಬಿದ್ದು ಕೋಮಾಗೆ ಜಾರಿದ್ದಾರೆ. ಗುರುವಾರವಷ್ಟೇ ಸಿದ್ದಾರ್ಥ ಮೈಸೂರಿಗೆ ಆಗಮಿಸಿ, ತಂದೆ ಆರೋಗ್ಯ ವಿಚಾರಿಸಿದ್ದರು. ಮತ್ತೆ ಬೆಳಗ್ಗೆ ಚಾಮುಂಡಿ ಬೆಟ್ಟಕ್ಕೆ ತೆರಳಿ ತಾಯಿ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿದ್ದರು. 

ಅದೇ ಕೊನೇ ಭೇಟಿ ಎನ್ನುತ್ತಾರೆ ಎಸ್‌.ಎಂ.ಕೃಷ್ಣ ಅಭಿಮಾನಿಗಳ ಸಂಘದ ಅಧ್ಯಕ್ಷ ವಿಕ್ರಾಂತ್‌ ಪಿ.ದೇವೇಗೌಡ. ಗಂಗಯ್ಯ ಹೆಗ್ಡೆ ಅವರು ಚಿಕಿತ್ಸೆಗಾಗಿ ದಾಖಲಾದ ದಿನದಿಂದಲೂ ಆಗಾಗ್ಗೆ ಸಿದ್ಧಾರ್ಥ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿಕೊಂಡು ಹೋಗುತ್ತಿದ್ದರು. ಸಿದ್ಧಾರ್ಥ ಅವರ ತಾಯಿ ವಾಸಂತಿ ಹೆಗ್ಡೆ ಮೈಸೂರಲ್ಲೇ ಇದ್ದರು. ಆದರೆ ಪುತ್ರ ನಾಪತ್ತೆಯಾದ ಸುದ್ದಿ ತಿಳಿಯುತ್ತಿದ್ದಂತೆ ಅವರು ಮೂಡಿಗೆರೆಯ ತಮ್ಮ ನಿವಾಸಕ್ಕೆ ತೆರಳಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಭೂಕಂಪದ ಬೆನ್ನಲ್ಲೇ ಜಪಾನ್‌ನಲ್ಲಿ ಸುನಾಮಿ ಎಚ್ಚರಿಕೆ, ಭಾರತದ ಕರಾವಳಿ ಪ್ರದೇಶಕ್ಕಿದೆಯಾ ಆತಂಕ?
Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!