ಸಿದ್ಧಾರ್ಥ್‌ಗೆ ಹಿಂದಿನ ಐಟಿ ಡಿಜಿ ಕಿರುಕುಳ? ಪತ್ರದಲ್ಲಿ ಕೊಟ್ರು ಸುಳಿವು!

Published : Jul 30, 2019, 11:46 AM ISTUpdated : Jul 30, 2019, 01:25 PM IST
ಸಿದ್ಧಾರ್ಥ್‌ಗೆ ಹಿಂದಿನ ಐಟಿ ಡಿಜಿ ಕಿರುಕುಳ? ಪತ್ರದಲ್ಲಿ ಕೊಟ್ರು ಸುಳಿವು!

ಸಾರಾಂಶ

ಕಾಫೀಡೇ ಮಾಲೀಕ ಸಿದ್ಧಾರ್ಥ ನಾಪತ್ತೆ| ನೇತ್ರಾವತಿ ನದಿ ತೀರದಲ್ಲಿ ಮುಂದುವರೆದ ಹುಡುಕಾಟ| ಸಿದ್ಧಾರ್ಥ ಬರೆದ ಪತ್ರದಲ್ಲಿ ಹಿಂದಿನ ಐಟಿ ಡಿಜಿ ಕಿರುಕುಳದ ಮಾಹಿತಿ| ಆರೋಪ ಕೇಳಿ ಸ್ಪಷ್ಟನೆ ಕೊಟ್ಟ ಆದಾಯ ತೆರಿಗೆ ಇಲಾಖೆ

ಬೆಂಗಳೂರು[ಜು.30]: ಕಾಫಿ ಡೇ ಮಾಲೀಕ ಸಿದ್ಧಾರ್ಥ ನಿಗೂಢ ನಾಪತ್ತೆ ಪ್ರಕರಣ ರಾಜ್ಯಾದ್ಯಂತ ಸದ್ದು ಮಾಡುತ್ತಿದೆ. ಸೋಮವಾರ ಸಂಜೆ ಮಂಗಳೂರಿನ ನೇತ್ರಾವತಿ ನದಿ ತಟದ ಬಳಿ ನಾಪತ್ತೆಯಾದ ಸಿದ್ದಾರ್ಥಗಾಗಿ ಬಹಳಷ್ಟು ಹುಡುಕಾಟ ನಡೆಸಿದ್ದರೂ ಅವರಿನ್ನೂ ಪತ್ತೆಯಾಗಿಲ್ಲ. ಹೀಗಿರುವಾಗ ಇಂದು ಬೆಳಗ್ಗೆ ಪತ್ತೆಯಾದ ಅವರು ಬರೆದಿದ್ದಾರೆನ್ನಲಾದ ಪತ್ರ ಹಲವಾರು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ. ಅದರಲ್ಲೂ ಪ್ರಮುಖವಾಗಿ ಅವರಿಗೆ ಹಿಂದಿನ ಐಟಿ ಡಿಜಿ ಕಿರುಕುಳ ನೀಡಿದ್ದರೆಂದು ಉಲ್ಲೇಖಿಸಿರುವುದು ಬಹಳಷ್ಟು ಚರ್ಚೆ ಹುಟ್ಟಿಸಿದೆ.

ಕಾಫಿಡೇ ಮಾಲೀಕ ಸಿದ್ದಾರ್ಥ ಐಟಿ ಡಿಜಿ ವಿರುದ್ಧ ಹೇಳಿದ್ದೇನು?

ಆರೋಪ 1 - ಹಿಂದಿನ ಆದಾಯ ತೆರಿಗೆ ಇಲಾಖೆ ಡಿಜಿಯಿಂದ ಕಿರುಕುಳ ಅನುಭವಿಸಿದೆ

ಆರೋಪ 2 - ಬೇರೆ, ಬೇರೆ ಕಾರಣಗಳಿಗೆ ನಮ್ಮ ಕಂಪನಿ ಷೇರು ಮುಟ್ಟುಗೋಲು ಹಾಕಿಕೊಂಡ ಐಟಿ

ಆರೋಪ 3 - ಐಟಿ ದಾಳಿಯಿಂದ ಮೈಂಡ್ ಟ್ರೀ ಡೀಲ್ ಮುಂದುವರಿಸುವುದು ಸಾಧ್ಯವಾಗಲಿಲ್ಲ 

ಆರೋಪ 4 - ಎರಡನೇ ಬಾರಿ ಕಾಫಿ ಡೇ ಷೇರು ಮುಟ್ಟುಗೋಲು ಹಾಕಿಕೊಂಡಿದ್ದ ಐಟಿ

ಆರೋಪ 5 - ಐಟಿ ದಾಳಿಯಿಂದ ನನ್ನ ಕಂಪನಿ ತೀವ್ರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿತು 

ಆರೋಪ 6 - ಇದು ಆದಾಯ ತೆರಿಗೆ ಇಲಾಖೆಯಿಂದ ನನಗೆ ಆದ ಅನ್ಯಾಯ

"

ಎಸ್. ಎಂ ಕೃಷ್ಣ ಅಳಿಯ, ಉದ್ಯಮಿ ಸಿದ್ಧಾರ್ಥ ಆತ್ಮಹತ್ಯೆ? ಪತ್ರದಲ್ಲಿ ಮಹತ್ವದ ಮಾಹಿತಿ!

ಇನ್ನು ಸಿದ್ಧಾರ್ಥ ಮಾಡಿರುವ ಆರೋಪಗಳ ಕುರಿತಾಗಿ ತೆರಿಗೆ ಇಲಾಖೆ ಮೂಲಗಳು ಸ್ಪಷ್ಣನೆ ನೀಡಿದ್ದು, 'ಸಿದ್ಧಾರ್ಥ ವಿರುದ್ದ ಕಾನೂನು ಕ್ರಮ ಮಾತ್ರ ಕೈಗೊಳ್ಳಲಾಗಿದೆ. ಕಿರುಕುಳ ನೀಡಿದ್ದಾರೆ ಎಂಬುದು ಸತ್ಯಕ್ಕೆ ದೂರವಾದ ಮಾತು. ಮೈಂಡ್ ಟ್ರೀ ಶೇರ್ ಗಳನ್ನ ಅವರ ಮನವಿಯಂತೆ ಹಿಂದಿರುಗಿಸಲಾಗಿದೆ. ಮೈಂಡ್ ಟ್ರೀ ಶೇರ್ ಗಳನ್ನ ಅವರ ಇಚ್ಚೆಯಂತೆ ಮಾರಾಟ ಮಾಡಿಕೊಂಡಿದ್ದಾರೆ' ಎಂದಿದ್ದಾರೆ.

"

ಅದೇನಿದ್ದರೂ ಪತ್ತೆಯಾದ ಪತ್ರದಿಂದ ಸಿದ್ಧಾರ್ಥ ಆತ್ಮಹತ್ಯೆ ಮಾಡಿಕೊಂಡಿದ್ದಾರೆಂಬ ಅನುಮಾನಗಳು ವ್ಯಕ್ತವಾಗಿದೆ. ಸದ್ಯ ಪೊಲೀಸರು ಕಾರು ಡ್ರೈವರ್ ವಿಚಾರಣೆ ನಡೆಸುತ್ತಿದ್ದು, ನೇತ್ರಾವತಿ ನದಿಯಲ್ಲೂ ಸಿದ್ಧಾರ್ಥಗಾಗಿ ಹುಡುಕಾಟ ಮುಂದುವರೆದಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

62 ವರ್ಷಗಳ ಸುದೀರ್ಘ ಕಾನೂನು ಹೋರಾಟದ ನಡೆಸಿ ಗೆದ್ದ 82ರ ವೃದ್ಧ
ಬಿಜೆಪಿ ರಾಷ್ಟ್ರೀಯ ಕಾರ್ಯಾಧ್ಯಕ್ಷರಾಗಿ ನಿತಿನ್‌ ನಬೀನ್‌ ನೇಮಕ: ರಾಜಕೀಯ ವಲಯದಲ್ಲಿ ಅಚ್ಚರಿ