ಗಂಡಂದಿರೇ ಹೆಂಡತಿಗೆ ಬಯ್ಯುವ ಮುನ್ನ ಎಚ್ಚರ ..!

Published : May 30, 2018, 01:03 PM ISTUpdated : May 30, 2018, 01:40 PM IST
ಗಂಡಂದಿರೇ ಹೆಂಡತಿಗೆ ಬಯ್ಯುವ ಮುನ್ನ ಎಚ್ಚರ ..!

ಸಾರಾಂಶ

ಗಂಡಂದಿರೇ ಇನ್ನುಮುಂದೆ ನಿಮ್ಮ ಹೆಂಡತಿಗೆ ಬಯ್ಯುವ ಮುನ್ನ ಎಚ್ಚರ ವಹಿಸಿ. ಆಕೆಯ ಬಣ್ಣದ ಬಗ್ಗೆ ತೆಗುವ ಮುನ್ನ ಯೋಚಿಸಿ.  ಯಾಕೆಂದರೆ ನೀವಯ ಆಕೆಯನ್ನು ಕಪ್ಪು - ಕರಿ ಎಂದು ಕರೆದಿದ್ದೇ ಆದಲ್ಲಿ  ದುಷ್ಕೃತ್ಯ ಹಾಗೂ ಕ್ರೌರ್ಯ ಎಸಗಿರುವ ಅಪರಾಧದ ಅಡಿಯಲ್ಲಿ ನಿಮಗೆ ವಿಚ್ಛೇದನವನ್ನು ನೀಡಬಹುದು.   

ಚಂಡೀಗಢ :  ಗಂಡಂದಿರೇ ಇನ್ನುಮುಂದೆ ನಿಮ್ಮ ಹೆಂಡತಿಗೆ ಬಯ್ಯುವ ಮುನ್ನ ಎಚ್ಚರ ವಹಿಸಿ. ಆಕೆಯ ಬಣ್ಣದ ಬಗ್ಗೆ ತೆಗಳುವ ಮುನ್ನ ಯೋಚಿಸಿ.  ಯಾಕೆಂದರೆ ನೀವು ಆಕೆಯನ್ನು ಕಪ್ಪು - ಕರಿ ಎಂದು ಕರೆದಿದ್ದೇ ಆದಲ್ಲಿ  ದುಷ್ಕೃತ್ಯ ಹಾಗೂ ಕ್ರೌರ್ಯ ಎಸಗಿರುವ ಅಪರಾಧದ ಅಡಿಯಲ್ಲಿ ನಿಮಗೆ ವಿಚ್ಛೇದನವನ್ನು ನೀಡಬಹುದು. 
 
ಹೀಗೆಂದು ಹರ್ಯಾಣ ಮತ್ತು ಪಂಜಾಬ್ ಕೋರ್ಟ್ ಮಹತ್ವದ ಆದೇಶವೊಂದನ್ನು ನೀಡಿದೆ. ಮಹೇಂದ್ರ ಗರ್ ಪ್ರದೇಶದ ಮಹಿಳೆಯೋರ್ವರು, ಆಕೆಯ ಗಂಡ ಬಣ್ಣದ ಬಗ್ಗೆ ಹೀಗಳೆಯುತ್ತಿರುವುದಾಗಿ ಕೋರ್ಟ್ ಮೆಟ್ಟಿಲೇರಿದ್ದರು. ಸಾರ್ವಜನಿಕವಾಗಿಯೇ ಆಕೆಯ ಬಣ್ಣದ  ತೆಗಳುತ್ತಿದ್ದ. ಅಲ್ಲದೇ ಬಣ್ಣ ಕಪ್ಪೆಂದು ಗಂಡನ ಮನೆಗೂ ಕೂಡ ಸೇರಿಸುತ್ತಿರಲಿಲ್ಲ ಎಂದು ಅವರು ತಮ್ಮ ಅರ್ಜಿಯಲ್ಲಿ ತಿಳಿಸಿದ್ದರು.  

ಈ ಸಂಬಂಧ ವಿಚಾರಣೆ ನಡೆಸಿದ ನ್ಯಾಯಾಮೂರ್ತಿ ಎಂ.ಎಂ. ಎಸ್. ಬೇಡಿ ನೇತೃತ್ವದ ನ್ಯಾಯಪೀಠ ಆಕೆ ಮಾನಸಿಕವಾಗಿ ಹೆಚ್ಚು ನೋವನ್ನು ಅನುಭವಿಸಿದ್ದಾರೆ. ಬಣ್ಣದ ಬಗ್ಗೆ ಹೀಗಳೆದರೆ ಗಂಡನಿಗೆ ವಿಚ್ಛೇದನ ನೀಡಬಹುದು ಎಂದು  ಆದೇಶ ನೀಡಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

'ಉಪಲೋಕಾಯುಕ್ತರಿಗೆ ಒಂದ್ ನಮಸ್ಕಾರ': ಭ್ರಷ್ಟಾಚಾರದ ಬಗ್ಗೆ ಹೇಳಿಕೆ ನೀಡಲು ಮಾತ್ರ ಅಧಿಕಾರವಿದೆಯೇ? – ಹೆಚ್‌ಡಿಕೆ ವ್ಯಂಗ್ಯ
ಗಂಡ ಉಳಿಯಲಿಲ್ಲ, ಎಗ್ಸಾಂ ಬರೆಯಲಿಲ್ಲ, ಕ್ಯಾನ್ಸಲ್ ಆಗಿದ್ದು ಬರೀ ಫ್ಲೈಟ್ ಅಲ್ಲ ನೂರಾರು ಮಂದಿ ಕನಸು