
ತಿರುವನಂತಪುರಂ (ಸೆ.27): ಕೇರಳದಲ್ಲಿ ಬೀದಿ ನಾಯಿಗಳ ಉಪಟಳ ತೀವ್ರವಾಗಿದೆ. ನಾಯಿ ಕಡಿತದ ಪ್ರಕರಣಗಳು ವಿಪರೀತವಾಗಿ ಹೆಚ್ಚುತ್ತಿವೆ.
ಬೀದಿ ನಾಯಿಗಳ ಉಪಟಳಕ್ಕೆ ನಿಯಂತ್ರಣ ಹಾಕುವಂತೆ ಕೇರಳ ಕಾಂಗ್ರೆಸ್ ಎಂ ಯುವದಳದ ಸದಸ್ಯರು ಆಗ್ರಹಿಸಿದ್ದಾರೆ.
ಐದು ಸತ್ತ ನಾಯಿಗಳ ಕಾಲುಗಳನ್ನು ಬಿದಿರಿನ ಕೋಲಿಗೆ ಬಿಗಿದು ನೇತಾಡಿಸಲಾದ ಸ್ಥಿತಿಯಲ್ಲಿ ಕೋಟ್ಟಯಂನ ರಸ್ತೆಗಳಲ್ಲಿ ಮೆರವಣಿಗೆ ನಡೆಸಿದರು.
ಬೀದಿ ನಾಯಿಗಳ ಹಾವಳಿಯನ್ನು ನಿಯಂತ್ರಿಸಲು ಕೇಂದ್ರ ಹಾಗೂ ರಾಜ್ಯ ಸರಕಾರ ಸೂಕ್ತ ಹಾಗೂ ತ್ವರಿತ ಕ್ರಮ ತೆಗೆದುಕೊಳ್ಳದಿದ್ದರೆ ಶ್ವಾನ ಸಂಹಾರ ಅಭಿಯಾನವನ್ನು ತೀವ್ರಗೊಳಿಸುತ್ತೇವೆ ಎಂಬ ಎಚ್ಚರಿಕೆ ನೀಡಿದ್ದಾರೆ.
(ಸಾಂದರ್ಭಿಕ ಚಿತ್ರ)
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.