
ಟೋರೊಂಟೋ(ಏ.14): ಮಹತ್ವದ ಬೆಳವಣಿಗೆಯೊಂದರಲ್ಲಿ ಭಯೋತ್ಪಾದನಾ ಬೆದರಿಕೆಗಳ ಕುರಿತು ತಾನು ತಯಾರಿಸಿದ್ದ 2018ರ ವರದಿಯಿಂದ, ಸಿಖ್ ಹಾಗೂ ಖಲಿಸ್ತಾನಿ ಉಗ್ರವಾದದ ಪ್ರಸ್ತಾವನೆಗಳನ್ನು ಕೆನಡಾ ಸರ್ಕಾರ ತೆಗೆದು ಹಾಕಿದೆ.
2018 ರ ಕೆನಡಾದ ಭಯೋತ್ಪಾದನಾ ಹಾನಿಯ ಕುರಿತಾದ ಸಾರ್ವಜನಿಕ ವರದಿ'ಯಿಂದ ಸಿಖ್ ಉಗ್ರವಾದಿತ್ವ ಹಾಗೂ ಖಲಿಸ್ತಾನ ಉಗ್ರರ ಉಲ್ಲೇಖವನ್ನು ಕೆನಡಾ ಕೈಬಿಟ್ಟಿದೆ.
ಭಯೋತ್ಪಾದನಾ ಬೆದರಿಕೆಗಳ ಕುರಿತಾದ ಕೆನಡಾದ ವರದಿ ಅಲ್ಲಿನ ಸಿಖ್ರನ್ನು ಕೆರಳಿಸಿತ್ತು. ಅಲ್ಲದೇ ಈ ವರದಿಯನ್ನು ಹಿಂಪಡೆಯುವಂತೆ ಕೆನಡಾದ ಸಿಖ್ ಸಂಘಟನೆಗಳು ಒತ್ತಾಯಿಸಿದ್ದವು.
ಅದರಂತೆ ಸಿಖ್ ಸಮುದಾಯದ ಒತ್ತಡಕ್ಕೆ ಮಣಿದಿರುವ ಸರ್ಕಾರ, ವರದಿಯಿಂದ ಸಿಖ್ ಉಗ್ರಗಾಮಿತ್ವ ಮತ್ತು ಖಲಿಸ್ತಾನ್ ಪದಗಳನ್ನು ಅಳಿಸಿ ಹಾಕಿದೆ. ಆದರೆ 'ಭಾರತದೊಳಗೆ ಸ್ವತಂತ್ರ ರಾಜ್ಯ ಸ್ಥಾಪಿಸಲು ಹಿಂಸಾಚಾರ ಬೆಂಬಲಿಸುವ ಉಗ್ರರು' ಎಂಬ ಹೊಸ ಪದ ಸೇರಿಸಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.