
ಬೆಂಗಳೂರು(ಜು.06): ಆಕಸ್ಮಿಕವಾಗಿ ಕಾರಿಗೆ ಬೆಂಕಿ ತಗುಲಿದ ಪರಿಣಾಮ ಕಾರಿನ ಮುಂಭಾಗ ಸಂಪೂರ್ಣ ಸುಟ್ಟು ಕರಕಲಾದ ಘಟನೆ ಬೆಂಗಳೂರಿನ ರಿಚ್ಮಂಡ್ ರಸ್ತೆಯಲ್ಲಿ ನಡೆದಿದೆ.
ಇಂಜಿನ್'ನಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿದ್ದು, ಪಕ್ಕದಲ್ಲೇ ಹೋಗುತ್ತಿದ್ದ ವಾಹನ ಸವಾರರು ಕಾರ್ ಚಾಲಕನನ್ನು ಎಚ್ಚರಿಸಿ ವಾಹನ ನಿಲ್ಲಿಸಿದ್ದಾರೆ. ಚಾಲಕ ಕಾರಿನಿಂದ ಇಳಿಯುತ್ತಿದ್ದಂತೆ ನಡುರಸ್ತೆಯಲ್ಲೆ ಕಾರು ಹೊತ್ತಿ ಉರಿದಿದೆ. ಘಟನಾ ಸ್ಥಳಕ್ಕೆಬಂದ ಅಗ್ನಿಶಾಮಕ ಸಿಬ್ಬಂದಿ ಕೂಡಲೇ ಬೆಂಕಿಯನ್ನು ಆರಿಸಿದರು.
ಇದೇ ವೇಳೆ ಘಟನೆಯಿಂದ ಕೆಲಹೊತ್ತು ರಿಚ್'ಮಂಡ್ ರಸ್ತೆಯಲ್ಲಿ ಟ್ರಾಫಿಕ್ ದಟ್ಟಣೆ ಹೆಚ್ಚಾಗಿ ವಾಹನ ಸವಾರರು ಪರದಾಡುವಂತಾಯಿತು. ಇನ್ನು ಘಟನೆಯಿಂದ ಕಾರಿನ ಮುಂಭಾಗ ಸಂಪೂರ್ಣ ಸುಟ್ಟುಹೋಗಿದ್ದು. ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ .
ಎಂಜಿ ರಸ್ತೆಯಿಂದ ಮನೆಗೆ ಹೋಗುವಾಗ ಘಟನೆ ನಡೆದಿದ್ದು, ಅಶೋಕನಗರ ಸಂಚಾರಿ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.