ದೆವ್ವದ ವಿರುದ್ಧ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಕೇಸು ದಾಖಲು!

Published : Jul 08, 2018, 09:55 AM IST
ದೆವ್ವದ ವಿರುದ್ಧ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಕೇಸು ದಾಖಲು!

ಸಾರಾಂಶ

ಆತ್ಮಹತ್ಯೆ ಪ್ರಕರಣವೊಂದರಲ್ಲಿ ಅಪರಿಚಿತ ದೆವ್ವದ ವಿರುದ್ಧ ಗುಜರಾತ್‌ ಪೊಲೀಸರು ಕೇಸು ದಾಖಲಿಸಿದ ವಿಚಿತ್ರ ಘಟನೆ ಗುಜರಾತ್‌ನ ವಡೋದರಾದಲ್ಲಿ ನಡೆದಿದೆ. ಪೊಲೀಸರ ಈ ವರ್ತನೆಗೆ ತೀವ್ರ ಆಕ್ರೋಶವೂ ವ್ಯಕ್ತವಾಗಿದೆ.

ವಡೋದರಾ: ಆತ್ಮಹತ್ಯೆ ಪ್ರಕರಣವೊಂದರಲ್ಲಿ ಅಪರಿಚಿತ ದೆವ್ವದ ವಿರುದ್ಧ ಗುಜರಾತ್‌ ಪೊಲೀಸರು ಕೇಸು ದಾಖಲಿಸಿದ ವಿಚಿತ್ರ ಘಟನೆ ಗುಜರಾತ್‌ನ ವಡೋದರಾದಲ್ಲಿ ನಡೆದಿದೆ. ಪೊಲೀಸರ ಈ ವರ್ತನೆಗೆ ತೀವ್ರ ಆಕ್ರೋಶವೂ ವ್ಯಕ್ತವಾಗಿದೆ.

ಇತ್ತೀಚೆಗೆ ವಡೋದರಾ ಜಿಲ್ಲೆಯ ಪಡ್ರಾ ತಾಲೂಕಿನ ಮಹಿಳೆಯೊಬ್ಬರು ಮೈಮೇಲೆ ಸೀಮೆಎಣ್ಣೆ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ್ದರು. ಈ ವೇಳೆ ಮನೆಯವರು ಧಾವಿಸಿ ಮಹಿಳೆಯನ್ನು ಸಾವಿನಿಂದ ಬಚಾವ್‌ ಮಾಡಿದ್ದರು. 

ನಂತರ ಪೊಲೀಸ್‌ ವಿಚಾರಣೆ ವೇಳೆ, ದೆವ್ವವೊಂದು ಬಂದು ನನಗೆ ಮೈಮೇಲೆ ಸೀಮೆಎಣ್ಣೆ ಸುರಿದು ಆತ್ಮಹತ್ಯೆ ಮಾಡಿಕೊಳ್ಳುವಂತೆ ಸೂಚಿಸಿತ್ತು. ಹೀಗಾಗಿ ಮಾಡಿಕೊಂಡೆ ಎಂದು ಮಹಿಳೆ ಹೇಳಿದ್ದಾರೆ. ಪೊಲೀಸರು ಕೂಡಾ ಈ ಮಾತನ್ನು ಕೇಳಿ, ಎಫ್‌ಐಆರ್‌ ಪ್ರತಿಯ ಆರೋಪಿ ಕಾಲಂನಲ್ಲಿ ಅಪರಿಚಿತ ದೆವ್ವ ಎಂದು ಬರೆದಿದ್ದಾರೆ.

ಆದರೆ ಮಹಿಳೆಯ ತಂದೆ ಮಾತ್ರ ಈ ಹೇಳಿಕೆಯನ್ನು ಪೂರ್ಣವಾಗಿ ತಳ್ಳಿಹಾಕಿದ್ದು, ಗಂಡನ ಮನೆಯವರ ಕಿರುಕುಳಕ್ಕೆ ಒಳಗಾಗಿ ಆಕೆ ಹೀಗೆ ಮಾಡಿಕೊಂಡಿರುವ ಸಾಧ್ಯತೆ ಇದೆ ಎಂದು ದೂರಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ನೆಹರೂ ಕಾಲದಲ್ಲೇ ಮೊದಲ ಮತಗಳ್ಳತನ ನಡೆದಿದ್ದು; ಎರಡು ಮತ ಪಡೆದು ಪ್ರಧಾನಿಯಾದರು' ಸಂಸತ್ತಿನಲ್ಲಿ ಕಾಂಗ್ರೆಸ್ ವಿರುದ್ಧ ಶಾ ವಾಗ್ದಾಳಿ
2.84 ಲಕ್ಷ ಹುದ್ದೆ ಖಾಲಿ ಇದ್ರೂ, ಶೇ.9 ಹುದ್ದೆಗಳ ನೇಮಕಾತಿಯನ್ನೇ ಪ್ರಚಾರಕ್ಕೆ ಬಳಸಿಕೊಂಡ ಸರ್ಕಾರ!