
ಲಖನೌ (ಸೆ. 04): ಉತ್ತರ ಪ್ರದೇಶದ ಶಾಲೆಯೊಂದರಲ್ಲಿ ವಿದ್ಯಾರ್ಥಿಗಳಿಗೆ ರೋಟಿ ಜೊತೆಗೆ ಪಲ್ಯದ ಬದಲಿಗೆ ಬರೀ ಉಪ್ಪು ನೀಡಲಾಗುತ್ತಿದೆ ಎಂಬ ವರದಿ ಪ್ರಸಾರ ಮಾಡಿದ್ದ ಪತ್ರಕರ್ತ ಹಾಗೂ ವಿಷಯ ತಿಳಿದ ಬಳಿಕ ಸಮಸ್ಯೆ ಪರಿಹರಿಸದೇ, ವಿಷಯವನ್ನು ಪತ್ರಕರ್ತನಿಗೆ ತಿಳಿಸಿ ಸುದ್ದಿ ಮಾಡಿಸಿದ ಕಾರಣಕ್ಕೆ ಗ್ರಾಮ ಮುಖ್ಯಸ್ಥನ ಮೇಲೆ ಪೊಲೀಸರು ಕೇಸು ದಾಖಲಿಸಿದ್ದಾರೆ.
ಮಿರ್ಜಾಪುರ ಜಿಲ್ಲೆಯ ಜಮಾಲ್ಪುರ ಪ್ರಾಥಮಿಕ ಶಾಲೆಯಲ್ಲಿ ಈ ಘಟನೆ ನಡೆದಿದೆ. ಈ ನಡುವೆ ಕೇಸು ದಾಖಲಿಸಿದ ಸರ್ಕಾರದ ವಿರುದ್ಧ ವಿಪಕ್ಷಗಳು ಕಿಡಿಕಾರಿವೆ. ಪತ್ರಕರ್ತನ ವಿರುದ್ಧದ ಪ್ರಕರಣವು ನ್ಯಾಯ ಹಾಗೂ ನಿರ್ಭೀತ ಪತ್ರಿಕೋದ್ಯಮ ಮೇಲಿನ ದಾಳಿಯಾಗಿದ್ದು, ಅಭಿವ್ಯಕ್ತ ಸ್ವಾತಂತ್ರ್ಯಕ್ಕಾಗಿ ಪ್ರತಿಯೊಬ್ಬರೂ ಒಂದಾಗಬೇಕು ಎಂದು ಮಾಜಿ ಸಿಎಂ ಅಖಿಲೇಶ್ ಯಾದವ್, ಕರೆ ನೀಡಿದರು.
ಈ ನಡುವೆ ಪ್ರಕರಣವು ಭಾರೀ ಟೀಕೆಗೆ ಗುರಿಯಾಗುತ್ತಲೇ, ಯಾವ ಹಿನ್ನೆಲೆಯಲ್ಲಿ ಕೇಸು ದಾಖಲಿಸಲಾಗಿದೆ ಎಂಬುದನ್ನು ಪರಿಶೀಲಿಸಲಾಗುವುದು ಎಂದು ರಾಜ್ಯ ಸರ್ಕಾರ ಹೇಳಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.