ಜನಾರ್ದನ ರೆಡ್ಡಿ ಆಯ್ತು, ಇದೀಗ ಸಿಸಿಬಿ ಹಿಟ್ ಲಿಸ್ಟ್‌ನಲ್ಲಿ ಸ್ವಾಮಿ..?

Published : Nov 15, 2018, 04:27 PM ISTUpdated : Nov 15, 2018, 04:41 PM IST
ಜನಾರ್ದನ ರೆಡ್ಡಿ ಆಯ್ತು, ಇದೀಗ ಸಿಸಿಬಿ ಹಿಟ್ ಲಿಸ್ಟ್‌ನಲ್ಲಿ ಸ್ವಾಮಿ..?

ಸಾರಾಂಶ

ಅಂಬಿಡೆಂಟ್ ಅವ್ಯವಹಾರದ ಡೀಲ್ ಪ್ರಕರಣಕ್ಕೆ ಸಂಬಂಧ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಅವರನ್ನ 4 ದಿನ ಜೈಲಿ ಕಳುಹಿಸಿದ್ದ ಸಿಸಿಬಿ, ಇದೀಗ ಮತ್ತೊಬ್ಬರಿಗೆ ಖೆಡ್ಡಾ ರೆಡಿ ಮಾಡಿದೆ  ಎಂದು ತಿಳಿದುಬಂದಿದೆ. ಅಷ್ಟಕ್ಕೂ ಸಿಸಿಬಿ ಹಿಟ್ ಲಿಸ್ಟ್ ನಲ್ಲಿರೋರು ಯಾರು? 

ಬೆಂಗಳೂರು, [ನ.15]: ಸಿಸಿಬಿ ಪೊಲೀಸರ ಮುಂದಿನ ಟಾರ್ಗೆಟ್ ಸ್ವಯಂ ಘೋಷಿತ ದೇವಮಾನವ ಬಿಡದಿಯ ಸ್ವಾಮಿ ನಿತ್ಯಾನಂದ ಎನ್ನಲಾಗುತ್ತಿದೆ. ನಿತ್ಯಾನಂದನ ವಿರುದ್ಧ ಪ್ರಕರಣ ದಾಖಲಿಸಲು‌ ಸಿಸಿಬಿ ಚಿಂತನೆ ನಡೆಸುತ್ತಿದೆ ಎಂದು ತಿಳಿದುಬಂದಿದೆ. 

ಗಾಂಜಾ ಸೇವನೆ ಮಾಡಿದ್ರೆ ಮುಕ್ತಿ ಸಿಗುತ್ತೆ. ಗಾಂಜಾ ಸೇವನೆಯಿಂದ ಆಕಾಶದಲ್ಲಿ ತೇಲಬಹುದು ಎಂದು ಸಾರ್ವಜನಿಕವಾಗಿ ಗಾಂಜಾ, ಅಫೀಮು ಸೇವನೆ ಮಾಡುವಂತೆ ಪ್ರಚೋದನೆ ನೀಡಿದ್ದರು.

ಈ ಆರೋಪದ ಮೇಲೆ ನಿತ್ಯಾನಂದನ ವಿರುದ್ಧ  ಪ್ರಕರಣ ದಾಖಲಿಸಲು ಸಿಸಿಬಿ ಚಿಂತನೆ ನಡೆಸಿದೆ ಎನ್ನಲಾಗುತ್ತಿದೆ. ಅಲ್ಲದೇ ಸಾಮಾಜಿಕ ಜಾಲತಾಣಗಳಲ್ಲಿ ಕೂಡ ಗಾಂಜಾ ಸೇವನೆಗೆ ನಿತ್ಯಾನಂದ ಸ್ವಾಮಿ ಪ್ರಚೋದನೆ ಕೊಟ್ಟಿದ್ದಾರೆ ಎಂದು ಸಾರ್ಜನಿಕರು ನಿತ್ಯಾನಂದನ ವಿರುದ್ಧ ದೂರು ನೀಡಿದ್ದಾರೆ. 

ಈ ದೂರಿನ ಹಿನ್ನೆಲೆಯಲ್ಲಿ ಇನ್ನೆರಡು ದಿನದಲ್ಲಿ ವಿಚಾರಣೆಗೆ ಹಾಜರಾಗುವಂತೆ ನಿತ್ಯಾನಂದ ಸ್ವಾಮಿಗೆ ನೋಟಿಸ್​ ನೀಡಲು ಸಿಸಿಬಿ‌ ಚಿಂತನೆ ನಡೆಸಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಗೃಹಸಚಿವರು ಏನು ಬೇಕಾದ್ರೂ ಮಾಡಬಹುದು, ಅವರ ಕಣ್ಣುಗಳನ್ನು ನೋಡಿದರೆ ನನಗೆ ಭಯವಾಗುತ್ತೆ: ಮಮತಾ ಬ್ಯಾನರ್ಜಿ
ಅಣ್ಣಾ ಹಜಾರೆ ಮತ್ತೆ ಉಪವಾಸ ಸತ್ಯಾಗ್ರಹ ಘೋಷಣೆ: ಸ್ಥಳ, ದಿನಾಂಕ ನಿಗದಿ, ಕಾರಣವೇನು ಗೊತ್ತಾ?