
ನವದೆಹಲಿ: 50 ಕೋಟಿ ರು.ಗಿಂತ ಹೆಚ್ಚಿನ ಮೊತ್ತದ ಎಲ್ಲಾ ಸುಸ್ತಿ ಸಾಲಗಳನ್ನು ಸಂಭವನೀಯ ವಂಚನೆ ಪ್ರಕರಣ ಎಂದು ಪರಿಗಣಿಸಿ, ಅಂಥ ಪ್ರಕರಣಗಳನ್ನು ಸಿಬಿಐ ತನಿಖೆಗೆ ನೀಡಬೇಕು ಎಂದು ಕೇಂದ್ರ ಹಣಕಾಸು ಸಚಿವಾಲಯ ಎಲ್ಲಾ ಸಾರ್ವಜನಿಕ ವಲಯದ ಬ್ಯಾಂಕ್ಗಳಿಗೆ ಸೂಚಿಸಿದೆ.
ಪಿಎನ್ಬಿ ವಂಚನೆ ಸೇರಿದಂತೆ ಹಲವು ಬ್ಯಾಂಕ್ ವಂಚನೆ ಪ್ರಕರಣಗಳು ಬೆಳಕಿಗೆ ಬಂದ ಬೆನ್ನಲ್ಲೇ ಸಚಿವಾಲಯ ಈ ನಿರ್ಧಾರಕ್ಕೆ ಬಂದಿದೆ.
ಪಿಎಸ್ಬಿಗಳು ಕೇಂದ್ರೀಯ ತನಿಖಾ ಸಂಸ್ಥೆಗಳೊಂದಿಗೆ ಇಂತಹ ವಂಚನೆಗಳ ತನಿಖೆಗೆ ಕೈಜೋಡಿಸುವಂತೆಯೂ ಕೋರಲಾಗಿದೆ. ಎಲ್ಲ ಪಿಎಸ್ಬಿಗಳಲ್ಲಿ ಸುಮಾರು 8.5 ಲಕ್ಷ ಕೋಟಿ ರು. ಮೌಲ್ಯದ ಅನುತ್ಪಾದಕ ಆಸ್ತಿ ಖಾತೆಗಳು ಘೋಷಣೆಯಾಗಿವೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.