
ಧಾರವಾಡ : ಬೆಕ್ಕು ಕಚ್ಚಿ ಇಬ್ಬರು ವ್ಯಕ್ತಿಗಳು ಸಾವನ್ನಪ್ಪಿದ ಘಟನೆ ಧಾರವಾಡ ತಾಲೂಕಿನ ನೀರಲಕಟ್ಟಿ ಗ್ರಾಮದಲ್ಲಿ ನಡೆದಿದೆ.
ಗಿರಿಜವ್ವ ಗಂಟಿ (60) ಮಲ್ಲೇಶಪ್ಪ ಮಟಗಿ ( 70) ಮೃತ ದುರ್ದೈವಿಗಳಾಗಿದ್ದಾರೆ. ರೇಬಿಸ್ ರೋಗದಿಂದ ನೀರಲಕಟ್ಟೆ ಗ್ರಾಮಸ್ಥರಲ್ಲಿ ಆತಂಕ ಎದುರಾಗಿದ್ದು, ಇದೀಗ ವಿಚಾರ ತಡವಾಗಿ ಬೆಳಕಿಗೆ ಬಂದಿದೆ.
ಕಳೆದ ಫೆಬ್ರವರಿ 3ನೇ ತಾರೀಕು ಹುಚ್ಚು ಬೆಕ್ಕು ಕಚ್ಚಿ ಇಬ್ಬರು ಗಾಯಗೊಂಡಿದ್ದರು. ಆದರೆ ಚುಚ್ಚು ಮದ್ದು ತೆಗೆದುಕೊಳ್ಳಲು ನಿರ್ಲಕ್ಷಿಸಿದ ಕಾರಣ ಸಾವು ಸಂಭವಿಸಿದೆ.
ಈಗ ಕುಟುಂಬಸ್ಥರಿಗೆಲ್ಲಾ ವೈದ್ಯಾಧಿಕಾರಿಗಳು ಚುಚ್ಚು ಮದ್ದು ನೀಡಿದ್ದಾರೆ. ಧಾರವಾಡ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.