ಅಧ್ಯಯನ ತಂಡಕ್ಕೆ ಕರ್ನಾಟಕದ ಸಂಕಷ್ಟ ಅರಿವಾಗಿದೆ: ಸಿಎಂ ಸಿದ್ದರಾಮಯ್ಯ

Published : Oct 10, 2016, 03:04 AM ISTUpdated : Apr 11, 2018, 12:46 PM IST
ಅಧ್ಯಯನ ತಂಡಕ್ಕೆ ಕರ್ನಾಟಕದ ಸಂಕಷ್ಟ ಅರಿವಾಗಿದೆ: ಸಿಎಂ ಸಿದ್ದರಾಮಯ್ಯ

ಸಾರಾಂಶ

ತಂಡವು ಸಲ್ಲಿಸುವ ವರದಿಯಿಂದ ನಮಗೆ ನ್ಯಾಯ ಸಿಗಲಿದೆ, ಸಿಎಂ ವಿಶ್ವಾಸ

ಮಂಗಳೂರು: ‘‘ಕಾವೇರಿ ವಿವಾದದ ಹಿನ್ನೆಲೆಯಲ್ಲಿ ರಾಜ್ಯಕ್ಕೆ ಭೇಟಿ ನೀಡಿದ್ದ ಕೇಂದ್ರ ತಂಡಕ್ಕೆ ಇಲ್ಲಿನ ಸಂಕಷ್ಟ ಅರಿವಾಗಿದೆ. ತಂಡದಿಂದಾಗಿ ನಮಗೆ ನ್ಯಾಯ ಸಿಗುವ ವಿಶ್ವಾಸ ಇದೆ,'' ಎಂದು ಮುಖ್ಯಮಂತ್ರಿ ಸಿದ್ದರಾಮ​ಯ್ಯ ಹೇಳಿದ್ದಾರೆ.

ಮಂಗಳೂರಿನಲ್ಲಿ ಮಾತನಾಡಿರುವ ಅವರು, ‘‘ತಾಂತ್ರಿಕ ತಂಡ ಕಳುಹಿಸಿ ರಾಜ್ಯದ ಸ್ಥಿತಿಯನ್ನು ಅಧ್ಯಯನ ಮಾಡುವಂತೆ ರಾಜ್ಯದ ಪರವಾಗಿ ನಾವೇ ಕೇಳಿದ್ದೆವು. ಅದರಂತೆ ಸುಪ್ರೀಂ ಕೋರ್ಟ್‌ ತಾಂತ್ರಿಕ ತಂಡವನ್ನು ಕಳುಹಿಸಿತ್ತು. ರಾಜ್ಯದ ಜನತೆಯ ಕಷ್ಟತಂಡಕ್ಕೆ ಅರಿವಾಗಿದೆ. ತಂಡವು ಸದ್ಯದ ಸ್ಥಿತಿಗತಿಯನ್ನು ಅಧ್ಯಯನ ನಡೆಸಿ ತಮಿಳುನಾಡು ಭಾಗದ ಅಧ್ಯಯನಕ್ಕೆ ತೆರಳಿದೆ. ಅದು ಸಲ್ಲಿಸುವ ವರದಿಯಿಂದ ನಮಗೆ ನ್ಯಾಯ ಸಿಗಲಿದೆ,'' ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಡಿಜಿಪಿಯಾಗಿ ಅಲೋಕ್‌ ಕುಮಾರ್ ಮುಂಬಡ್ತಿ, ಸರ್ಕಾರದ ವಿರುದ್ಧ 8 ತಿಂಗಳ ಕಾನೂನು ಹೋರಾಟಕ್ಕೆ ಜಯ!
ರಾಮನಗರ: ರಸ್ತೆಗೆ ಕುರಿಗಳು ಅಡ್ಡಿ, ಹಾರ್ನ್ ಮಾಡಿದ್ದಕ್ಕೆ ಬಸ್ ಚಾಲಕನ ಮೇಲೆ ಗ್ರಾಮಸ್ಥರಿಂದ ಹಲ್ಲೆ!