ಕಾವೇರಿ ತೀರ್ಪು: ರಾಜ್ಯಕ್ಕೇನು ಆತಂಕ ?

Published : Feb 16, 2018, 09:52 AM ISTUpdated : Apr 11, 2018, 01:08 PM IST
ಕಾವೇರಿ ತೀರ್ಪು: ರಾಜ್ಯಕ್ಕೇನು ಆತಂಕ ?

ಸಾರಾಂಶ

ಕರ್ನಾಟಕ,ತಮಿಳುನಾಡು, ಕೇರಳ, ಪುದುಚೇರಿಯ ಅಣೆಕಟ್ಟುಗಳ ನಿಯಂತ್ರಣ ತೆಗೆದುಕೊಳ್ಳಲಿದೆ ಎನ್ನಲಾಗಿರುವ ಕಾವೇರಿ ಜಲ ನಿರ್ವಹಣಾ ಮಂಡಳಿ ಕುರಿತೂ ತೀರ್ಪು ಬರುವ ಸಾಧ್ಯತೆ.

ಅಂತರ್ ಕೊಳ್ಳ ನೀರು ಹಂಚಿಕೆ:

ನ್ಯಾಯಾಧಿಕರಣದ ಐತೀರ್ಪಿನಲ್ಲಿ ಬೆಂಗಳೂರಿನ ಕುಡಿವ ನೀರಿಗೆ ನಿಗದಿಪಡಿಸಿದ್ದ ನೀರಿನ ಪ್ರಮಾಣ ಕಡಿಮೆ ಇತ್ತು. ಇದನ್ನು ಕರ್ನಾಟಕ ಪ್ರಶ್ನಿಸಿದ್ದು, ಸುಪ್ರೀಂಕೋರ್ಟ್ ಪುರಸ್ಕರಿಸಿದರೆ ಬೆಂಗಳೂರಿಗೆ ಕುಡಿಯುವ ನೀರು ಸಿಗುತ್ತದೆ. ಇಲ್ಲವಾದಲ್ಲಿ ಸಂಕಷ್ಟ.

ನಿರ್ವಹಣಾ ಮಂಡಳಿ

ಕರ್ನಾಟಕ,ತಮಿಳುನಾಡು, ಕೇರಳ, ಪುದುಚೇರಿಯ ಅಣೆಕಟ್ಟುಗಳ ನಿಯಂತ್ರಣ ತೆಗೆದುಕೊಳ್ಳಲಿದೆ ಎನ್ನಲಾಗಿರುವ ಕಾವೇರಿ ಜಲ ನಿರ್ವಹಣಾ ಮಂಡಳಿ ಕುರಿತೂ ತೀರ್ಪು ಬರುವ ಸಾಧ್ಯತೆ. ಇದರ ಸ್ವರೂಪ, ಕಾರ್ಯವ್ಯಾಪ್ತಿ, ಅಧಿಕಾರ ಎಲ್ಲವೂ ಅಸ್ಪಷ್ಟ. ಆದರೆ, ಕಾವೇರಿ ನೀರಿನ ಮೇಲಿನ ಹಿಡಿತ ಮಂಡಳಿಯ ಪಾಲಾದರೆ ಕರ್ನಾಟಕಕ್ಕೆ ಸಂಕಷ್ಟ ತಪ್ಪಿದ್ದಲ್ಲ.

ಎಷ್ಟು ಟಿಎಂಸಿ:

ನ್ಯಾಯಾಧಿಕರಣ ಐತೀರ್ಪಿ'ನಲ್ಲಿ ಕರ್ನಾಟಕಕ್ಕೆ ವಾರ್ಷಿಕ 270 ಟಿಎಂಸಿ ನೀರು ಹಂಚಿತ್ತು. ಇದು ಸಾಲದು, 465 ಟಿಎಂಸಿ ಬೇಕು ಎಂದು ಕರ್ನಾಟಕ ವಾದಿ ಸುತ್ತಾ ಬಂದಿದೆ. ಆದರೆ, 270ಕ್ಕಿಂತಲೂ ಕಡಿಮೆ ನೀರು ಸುಪ್ರೀಂಕೋರ್ಟ್ ಹಂಚಿದರೇನು ಗತಿ ಎಂಬುದು ಇನ್ನೊಂದು ಆತಂಕ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸ್ಯಾಂಡಲ್‌ವುಡ್ ನಿರ್ಮಾಪಕಿ ಪುಷ್ಪಾ ಅರುಣ್‌ಕುಮಾರ್‌ ಹಾಕಿದ್ದ ಅಕ್ರಮ ಕಾಂಪೌಂಡ್ ತೆರವು
'ಕೊರಗಜ್ಜ' ಸಿನಿಮಾ ತಂಡದ ವಿರುದ್ಧ ರೊಚ್ಚಿಗೆದ್ದ ಕೊಡಗಿನ ದೈವಾರಾಧಕರು, ನರ್ತಕರು; ಯಾಕೆ ಹೀಗಾಯ್ತು?