ಬೆಂಗಳೂರಿನಲ್ಲಿ ಹೆಚ್ಚಾಗಿರುವ ಪ್ರತಿಭಟನೆಯ ಕಿಚ್ಚು

Published : Sep 12, 2016, 12:14 PM ISTUpdated : Apr 11, 2018, 12:42 PM IST
ಬೆಂಗಳೂರಿನಲ್ಲಿ ಹೆಚ್ಚಾಗಿರುವ ಪ್ರತಿಭಟನೆಯ ಕಿಚ್ಚು

ಸಾರಾಂಶ

ಬೆಂಗಳೂರು (ಸೆ.12): ಕಾವೇರಿ ನದಿ ನೀರು ಹಂಚಿಕೆ ಸಂಬಂಧಪಟ್ಟಂತೆ ಸುಪ್ರೀಂಕೊರ್ಟ್ ಆದೇಶದ   ವಿರುದ್ಧ ಬೆಂಗಳೂರಿನಲ್ಲಿ ಭಾರೀ ಪ್ರತಿಭಟನೆ ನಡೆಯುತ್ತಿದೆ.  ಪ್ರತಿಭಟನೆಯ ಕಿಚ್ಚು ಹೆಚ್ಚಾಗುತ್ತಿದ್ದಂತೆ  ಗೃಹ ಸಚಿವ ಡಾ.ಜಿ.ಪರಮೇಶ್ವರ್​ ಸುದ್ದಿಗೋಷ್ಠಿ ನಡೆಸಿದ್ದಾರೆ.

ಸುಪ್ರೀಂಕೋರ್ಟ್ ಆದೇಶವನ್ನು ಖಂಡಿಸಿ ಪ್ರತಿಭಟನಾಕಾರರು ಬಸ್​ ಲಾರಿಗಳಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.  ತಮಿಳುನಾಡಿನ 27 ವಾಹನಗಳಿಗೆ ಹಾನಿ ಮತ್ತು ಬೆಂಕಿ ಹಚ್ಚಲಾಗಿದೆ.  ತಮಿಳುನಾಡಿನಲ್ಲಿ ಕರ್ನಾಟಕದ ವಾಹನಗಳಿಗೂ ಹಾನಿ ಮಾಡಲಾಗಿದೆ. 

ಮುಂಜಾಗ್ರತ ಕ್ರಮವಾಗಿ ಬೆಂಗಳೂರು ನಗರದಲ್ಲಿ 144 ಸೆಕ್ಷನ್​ ಜಾರಿಗೊಳಿಸುವಂತೆ  ನಗರ ಪೊಲೀಸ್ ಆಯುಕ್ತ ಮೇಘರೀಕ್ ಆದೇಶಿಸಿದ್ದಾರೆ.

ರಾಮನಗರ, ಮೈಸೂರು, ಮಂಡ್ಯ, ಚಾಮರಾಜನಗರ, ಗದಗ, ದಾವಣಗೆರೆ, ಚಿತ್ರದುರ್ಗ ಜಿಲ್ಲೆಗಳಲ್ಲಿ ಪ್ರತಿಭಟನೆಯಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮಾಲ್‌ನಲ್ಲಿ ಹುಡುಗಿಗೆ ಪ್ರಪೋಸ್ ಮಾಡಿ ಅಲ್ಲೇ ತಾಳಿ ಕಟ್ಟಿದ ಯುವಕ: ವೀಡಿಯೋ ಭಾರಿ ವೈರಲ್
Hate Speech Bill: ಸರ್ವಜನಾಂಗ ಶಾಂತಿಯ ತೋಟ ಆಗಲು ಈ ಮಸೂದೆ ಬೇಕೇಬೇಕು