ರಾಷ್ಟ್ರಪತಿಗಳ ಅಂಗಳಕ್ಕೆ ಕಾವೇರಿ ಸಮಸ್ಯೆ

Published : Sep 17, 2016, 04:08 PM ISTUpdated : Apr 11, 2018, 12:50 PM IST
ರಾಷ್ಟ್ರಪತಿಗಳ ಅಂಗಳಕ್ಕೆ ಕಾವೇರಿ ಸಮಸ್ಯೆ

ಸಾರಾಂಶ

ಶ್ರೀರಂಗಪಟ್ಟಣ (ಸೆ.17): ಕಾವೇರಿ ಜಲ ವಿವಾದವನ್ನು ರಾಷ್ಟ್ರಪತಿ ಅಂಗಳಕ್ಕೆ ತೆಗೆದುಕೊಂಡು ಹೋಗಲು ನಿರ್ಧರಿಸಿರುವ ರಾಜ್ಯ ರೈತ ಸಂಘ, ರಾಷ್ಟ್ರಪತಿಗಳ ಭೇಟಿ ಮುಂದಾಗಿದೆ.

ಕೆಆರ್‌ಎಸ್‌ನಲ್ಲಿ ಶನಿವಾರ ಜಿಲ್ಲಾ ರೈತ ಸಂಘ ಹಮ್ಮಿಕೊಂಡಿದ್ದ ಕಾವೇರಿ ನೀರಿನ ಸಮಸ್ಯೆ ಪರಿಹಾರಕ್ಕೆ ಕಾನೂನು ಅಭಿಯಾನ ಮುಂದಿನ ಕ್ರಮಗಳು ಹಾಗೂ ಸಂವಾದ ಕಾರ್ಯಕ್ರಮದಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.

ರಾಜ್ಯದ ಪಾಲಿಗೆ ಕಣ್ಣು ,ಕಿವಿ ಇಲ್ಲದ ಪ್ರಧಾನ ಮಂತ್ರಿಗಳು ಕಾವೇರಿ ವಿಷಯದಲ್ಲಿ ಇಷ್ಟೊಂದು ಅನ್ಯಾಯವಾಗಿದ್ದರೂ ತುಟಿ ಬಿಚ್ಚಿ ಮಾತನಾಡಿಲ್ಲ. ಹೀಗಾಗಿ ರಾಷ್ಟ್ರಪತಿಗಳಾದರೂ ನಮ್ಮ ರಾಜ್ಯದ ರೈತರ ನೋವಿಗೆ ಸ್ಪಂದಿಸಿ ಸಮಸ್ಯೆ ಪರಿಹರಿಸುತ್ತಾರೆಂಬ ಹೊಸ ಆಶಯದಿಂದೊಂಗೆ ರಾಷ್ಟ್ರಪತಿ ಭೇಟಿ ರೈತ ಸಂಘ ನಿರ್ಧರಿಸಿದೆ.

ಕೆಆರ್‌ಎಸ್‌ ಜಲಾಶಯದಿಂದ ಪ್ರತಿದಿನ 12 ಕ್ಕೂ ಹೆಚ್ಚು ಕ್ಯುಸೆಕ್‌ ನೀರು ಹರಿಸಲಾಗುತ್ತಿದೆ. ಜಲಾಶಯದಲ್ಲಿ ನೀರಿನ ಮಟ್ಟದಿನೇ ದಿನೇ ಕುಸಿಯುತ್ತಿದೆ. ಜತೆಗೆ ರೈತರು ನಾಟಿ ಮಾಡಿರುವ ಬತ್ತದ ಬೆಳೆಗಳಿಗೆ ನೀರು ಒದಗಿಸುವುದು ಸಾಧ್ಯವಿಲ್ಲ. ಕುಡಿಯುವ ನೀರಿನ ಸಮಸ್ಯೆ ಸೃಷ್ಟಿಯಾಗಲಿದೆ. ಇಷ್ಟಾದರೂ ತಮಿಳುನಾಡಿಗೆ ಸುಪ್ರೀಂ ಕೋರ್ಟ್‌ನ ಆದೇಶ ಪಾಲಿಸುವ ಸರ್ಕಾರದ ನಡವಳಿಕೆ ಕುರಿತು ಸಮಗ್ರವಾಗಿ ಸಭೆಯಲ್ಲಿ ಚರ್ಚೆಮಾಡಿದ ನಂತರ ರಾಷ್ಟ್ರಪತಿಗಳನ್ನು ಭೇಟಿ ಮಾಡಲು ದಿನಾಂಕ ಸಮಯ ನಿಗದಿ ಮಾಡುವ ಬಗ್ಗೆ ನಿರ್ಧರಿಸಲಾಯಿತು.

ಪ್ರಧಾನಿ ಮೌನ:

ಪ್ರಧಾನ ಮಂತ್ರಿಗಳು ಎರಡು ರಾಜ್ಯದ ನೀರಿನ ಸಮಸ್ಯೆಗಳ ಕುರಿತಾಗಿ ತಿಳಿದಿದ್ದರೂ ಮೌನವಾಗಿದ್ದಾರೆ. ತಮಿಳುನಾಡಿನ ಒತ್ತಡಕ್ಕೆ ಮಣಿದು ಕಾವೇರಿ ನೀರಿನ ಸಂಬಂಧ ಮಧ್ಯ ಪ್ರವೇಶಿಸಲು ಹಿಂಜರಿಯುತ್ತಿದ್ದಾರೆ. ಹೀಗಾಗಿ ರೈತ ಸಂಘದ ನಿಯೋಗ ಈ ಬಗ್ಗೆ ರಾಷ್ಟ್ರ ಪತಿಗಳನ್ನು ಭೇಟಿ ಮಾಡುವುದರ ಜೊತೆಗೆ ರಾಜ್ಯ ರೈತ ಸಂಘದಿಂದಲೇ ಜಲ ನೀತಿ ಬಗ್ಗೆ ಕಾನೂನು ಹೋರಾಟ ನಡೆಸಲು ಮುಂದಾಗಿದ್ದೇವೆ ಎಂದು ಸಭೆಯಲ್ಲಿ ಚರ್ಚೆ ಮಾಡಲಾಯಿತು.

ಜಲನೀತಿಯಿಂದ ಪರಿಹಾರ ಸಾಧ್ಯ:

ಹಿರಿಯ ವಕೀಲ ವೇಣುಗೋಪಾಲ… ಮಾತನಾಡಿ, ನೀರಿನ ಎರಡು ರಾಜ್ಯಗಳ ಕುರಿತಾದ ಜಲನೀತಿಯ ಸಮಸ್ಯೆ ಬಗೆಹರಿಸಿಕೊಳ್ಳಲು ಸಂವಿಧಾನದಲ್ಲಿ 262 ಆರ್ಟಿಕಲ್‌ ನಲ್ಲಿ ರೂಪಿಸಿರುವಂತೆ ಸುಪ್ರೀಂ ಕೋರ್ಟ್‌ ಪ್ರವೇಶ ಮಾಡುವಂತಿಲ್ಲ. ಆಯಾ ಎರಡು ರಾಜ್ಯದವರೇ ಚರ್ಚೆ ಮಾಡಿ ಬಗೆಹರಿಸಿಕೊಳ್ಳಬೇಕು ಅದು ಸಾಧ್ಯವಾಗದಿದ್ದಾಗ ಮಾತ್ರ ಕೋರ್ಟ ಮೂಲಕ ಬಗೆ ಹರಿಸಬಹುದು. ತಮಿಳುನಾಡಿನ ಪ್ರಭಾವಕ್ಕೆ ಮಣಿದು ಕರ್ನಾಟಕವನ್ನು ನೀರಿನ ಸಮಸ್ಯೆಯಲ್ಲಿ ಸಿಲುಕುವಂತೆ ಮಾಡುತ್ತಿದೆ ಎಂದು ವಕೀಲರು ಸಭೆಯಲ್ಲಿ ತಿಳಿಸಿದರು.

ಮೇಲುಕೋಟೆ ಕ್ಷೇತ್ರ ಶಾಸಕ ಕೆ.ಎಸ್‌. ಪುಟ್ಟಣ್ಣಯ್ಯ ಮಾತನಾಡಿ, ಮುಂದಿನ ದಿನಗಳಲ್ಲಿ ರೈತರ ಬೆಳೆ ಉಳಿಸಿಕೊಳ್ಳಲು ಮಾಡುವ ಪ್ರಯತ್ನಗಳು ಹಾಗೂ ಕೋರ್ಟ್‌ ಆದೇಶವನ್ನು ಪಾಲನೆ ಮಾಡಬೇಕಾದ ಸರ್ಕಾರದ ಕ್ರಮಗಳ ಬಗ್ಗೆ ಈ ಸಂವಾದದಿಂದ ವರದಿ ತಯಾರಿಸಿ, ಜಿಲ್ಲಾ ರೈತ ಸಂಘದ ವತಿಯಿಂದ ವಕೀಲರ ಮೂಲಕ ಪಿಟಿಷನ್‌ ಹಾಕಿ ಕಾನೂನು ಹೋರಾಟಕ್ಕೆ ರಾಜ್ಯದ ಮುಖ್ಯಮಂತ್ರಿಗಳಿಗೂ ತಿಳಿಸಲಾಗುವುದು ಎಂದು ಹೇಳಿದರು.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮನೆಗೆ ಮರಳುತ್ತಿದ್ದ ವೈದ್ಯೆ ಹಿಂಬಾಲಿಸಿ ಕಿರುಕುಳ, ಬೆಂಗಳೂರಲ್ಲಿ ತಡರಾತ್ರಿ ಬೆಚ್ಚಿ ಬೀಳಿಸಿದ ಘಟನೆ
ಔಷಧಿ ಖರೀದಿ ಟೆಂಡರ್‌ ತನಿಖೆಗೆ ತಜ್ಞರ ಸಮಿತಿ: ಸಚಿವ ಶರಣ ಪ್ರಕಾಶ್‌ ಪಾಟೀಲ್‌