
ನವದೆಹಲಿ (ಸೆ.29): ಕಾವೇರಿ ಸಂಧಾನಕ್ಕಾಗಿ ಜಲಸಂಪನ್ಮೂಲ ಸಚಿವೆ ಉಮಾಭಾರತಿ ನೇತೃತ್ವದಲ್ಲಿ ಇಂದು ಕರೆದಿದ್ದ ಸಭೆಯಲ್ಲಿ ಉಭಯ ರಾಜ್ಯಗಳ ವಾದವನ್ನು ಆಲಿಸಿದ ಉಮಾಭಾರತಿ ಯಾವುದೇ ನಿರ್ಧಾರಕ್ಕೆ ಬಂದಿಲ್ಲ.
ಉಭಯ ರಾಜ್ಯಗಳ ವಾದವನ್ನು 4 ನೇ ಬಾರಿಗೆ ಅಟಾರ್ನಿ ಜನರಲ್ ಮೂಲಕ ಸುಪ್ರೀಂಕೋರ್ಟ್ ಮುಂದಿಡಲಿದ್ದೇವೆ ಎಂದು ಸಭೆ ಬಳಿಕ ಮಾಧ್ಯಮದವರನ್ನು ಉದ್ದೇಶಿಸಿ ಉಮಾಭಾರತಿ ಹೇಳಿದ್ದಾರೆ.
ಸುಪ್ರೀಂ ತೀರ್ಪಿನಿಂದ ಸಮಸ್ಯೆ ಉದ್ಭವಿಸಿದರೆ ಸಮಸ್ಯೆ ಬಗೆಹರಿಯುವವರೆಗೆ ಎರಡೂ ರಾಜ್ಯಗಳ ಗಡಿಯಲ್ಲಿ ಉಪವಾಸ ಸತ್ಯಾಗ್ರಹ ಮಾಡುತ್ತೇನೆ ಎಂದು ಉಮಾಭಾರತಿ ಹೇಳಿದ್ದಾರೆ.
ಸಮಸ್ಯೆ ಬಗೆಹರಿಸುವಲ್ಲಿ ಉಭಯ ರಾಜ್ಯಗಳು ಜನರ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಳ್ಳಬೇಕು ಎಂದು ಕಿವಿಮಾತು ಹೇಳಿದ್ದಾರೆ. ನಾಳೆ ಸುಪ್ರೀಂನಲ್ಲಿ ವಿಚಾರಣೆ ನಡೆಯಲಿದ್ದು ಕರ್ನಾಟಕ ಮತ್ತು ತಮಿಳುನಾಡು ಆದೇಶವನ್ನು ಪಾಲಿಸಬೇಕು ಎಂದಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.