ರಾಜ್ಯ ಸರ್ಕಾರದ ಮುಂದಿನ ನಡೆಯೇನು?

Published : Sep 27, 2016, 02:34 PM ISTUpdated : Apr 11, 2018, 01:02 PM IST
ರಾಜ್ಯ ಸರ್ಕಾರದ ಮುಂದಿನ ನಡೆಯೇನು?

ಸಾರಾಂಶ

ಬೆಂಗಳೂರು (ಸೆ.27): ಕಾವೇರಿ ಮೇಲ್ವಿಚಾರಣ ಅರ್ಜಿ ವಿಚಾರಣೆ ನಡೆಸಿದ ಸರ್ವೋಚ್ಚ ನ್ಯಾಯಾಲಯ 3 ದಿನಗಳ ಕಾಲ ನಿತ್ಯ 3 ಸಾವಿರ ಕ್ಯೂಸೆಕ್ ನೀರು ತಮಿಳುನಾಡಿಗೆ ಹರಿಸುವಂತೆ ಆದೇಶ ನೀಡಿದೆ. ಆದರೆ ಕಾವೇರಿ ಜಲಾಶಯಗಳಲ್ಲಿ ನೀರಿಲ್ಲದ ಕಾರಣ ಬಿಡಲಾಗುವುದಿಲ್ಲ ಎಂಬುದು ಸರ್ಕಾರದ ವಾದ. ಹಾಗಿದ್ದರೆ ಸರ್ಕಾರದ ಮುಂದಿರುವ ಹಾದಿಗಳೇನು?

ವಿಧಾನಸಭೆ ನಿರ್ಣಯವನ್ನು ಸುಪ್ರೀಂಕೋರ್ಟ್ ಒಪ್ಪಿಲ್ಲ, ಬೇರೆ ಹಾದಿಯತ್ತ ಚಿಂತಿಸಬಹುದು. ಎರಡೂ ರಾಜ್ಯಗಳ ಸಿಎಂ ಕುಳಿತು ಮಾತುಕತೆ ಮೂಲಕ ಸಮಸ್ಯೆ ಬಗೆಹರಿಸಿಕೊಳ್ಳಬಹುದು.

3 ದಿನಗಳ ಕಾಲ ನಿತ್ಯ 6 ಸಾವಿರ ಕ್ಯೂಸೆಕ್ ನೀರು ಹರಿಸಲು ನಿರ್ಧರಿಸಬಹುದು.

ಸುಪ್ರೀಂಕೋರ್ಟ್ ಆದೇಶ ಪಾಲಿಸಿ ನ್ಯಾಯಾಂಗ ನಿಂದನೆಯಿಂದ ತಪ್ಪಿಸಿಕೊಳ್ಳಬಹುದು.

ವಿಧಾನಸಭೆ ನಿರ್ಣಯದಂತೆ ನೀರು ಬಿಡದಿರಲು ರಾಜ್ಯ ಸರ್ಕಾರ ನಿರ್ಧರಿಸಬಹುದು.

ಕುಡಿಯಲಷ್ಟೇ ನೀರಿದೆ. ನೀರು ಬಿಡಲು ಸಾಧ್ಯವೇ ಇಲ್ಲ ಎಂದು ಕೋರ್ಟ್ ಮೊರೆ ಹೋಗಬಹುದು.

ಸಮಸ್ಯೆ ಪರಿಹಾರ ಕೋರಿ ಪ್ರಧಾನಮಂತ್ರಿ ನರೇಂದ್ರ ಮೋದಿ ಮಧ್ಯಸ್ಥಿಕೆಗೆ ಒತ್ತಾಯಿಸಬಹುದು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

BC Patil on Siddaramaiah: ಸಿದ್ದರಾಮಯ್ಯ ರಾಜೀನಾಮೆ ನನಗೆ ನೋವು ಕೊಡ್ತಿದೆ..; ಬಿಸಿ ಪಾಟೀಲ್ ಭಾವುಕ!
Food department server down: ಆಹಾರ ಇಲಾಖೆ ಸರ್ವರ್‌ಡೌನ್‌ ಶಾಕ್‌: ಮೇ ತಿಂಗಳು ಮುಗಿದರೂ 40% ಜನರಿಗೆ ಇನ್ನೂ ಪಡಿತರ ಸಿಕ್ಕಿಲ್ಲ!