‘ಕಾವೇರಿ’ ಕಿಚ್ಚಿಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು!: ಘಟನೆಯಲ್ಲಿ ಮುನಿರತ್ನ ಬೆಂಬಲಿಗರ ‘ಕೈ’ವಾಡ?

Published : Sep 22, 2016, 04:16 AM ISTUpdated : Apr 11, 2018, 01:04 PM IST
‘ಕಾವೇರಿ’ ಕಿಚ್ಚಿಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು!: ಘಟನೆಯಲ್ಲಿ ಮುನಿರತ್ನ ಬೆಂಬಲಿಗರ ‘ಕೈ’ವಾಡ?

ಸಾರಾಂಶ

ಬೆಂಗಳೂರು(ಸೆ.22): ಕಳೆದ ವಾರ ಕಾವೇರಿ ಗಲಾಟೆ ರಾಜ್ಯಾದ್ಯಂತ ಜೋರಾಗಿತ್ತು. ಸದ್ಯ ಬೆಂಗಳೂರು ಸೇರಿದಂತೆ ಕಾವೇರಿ ಕೊಳ್ಳದ ಭಾಗದಲ್ಲಿ ಶಾಂತ ಪರಿಸ್ಥಿತಿ ಇದೆ. ಆದರೆ, ಕಳೆದ 12ರಂದು ನಡೆದ ಕಾವೇರಿ ವಿಚಾರಕ್ಕೆ ಬೆಂಗಳೂರು ಹೊತ್ತಿ ಉರಿದಿತ್ತು. ರಸ್ತೆ ರಸ್ತೆಗಳಲ್ಲೂ ವಾಹನಗಳು ಬೆಂಕಿಗೆ ಆಹುತಿಯಾಗಿದ್ದವು. ಕಾವೇರಿ ವಿಚಾರವನ್ನೇ ಬಳಸಿಕೊಂಡ ಕೆಲವು ಕಿಡಿಗೇಡಿಗಳು ಕಾನೂನನ್ನು ಕೈಗೆ ತೆಗೆದುಕೊಂಡಿದ್ದರು. 

ಇದಕ್ಕೆ ಪುಷ್ಠಿ ನೀಡುವ ದೃಶ್ಯಗಳು ಸುವರ್ಣ ನ್ಯೂಸ್​​ಗೆ ಲಭ್ಯವಾಗಿದೆ. ರಾಜರಾಜೇಶ್ವರಿ ನಗರ ಕ್ಷೇತ್ರದ ಲಗ್ಗೆರೆ ವಾರ್ಡ್​​​​​​​​​​​​​​​​ನಲ್ಲಿ ಕೆಲವು ಯುವಕರು ಕೈಗೆ ಸಿಕ್ಕ ವಾಹನಗಳ ಮೇಲೆ ದಾಳಿ ನಡೆಸಿರುವ ದೃಶ್ಯ ಸಿಸಿಟಿಯಲ್ಲಿ ಸೆರೆಯಾಗಿದೆ. ಈ ಘಟನೆಗೆ ಶಾಸಕ ಮುನಿರತ್ನ ಅವರೇ ಕಾರಣ ಅಂತ ಲಗ್ಗೆರೆ ವಾರ್ಡ್ ಕಾರ್ಪೋರೇಟರ್​ ಮಂಜುಳಾ ನಾರಾಯಣ ಸ್ವಾಮಿ ಆರೋಪ ಮಾಡಿದ್ದಾರೆ . 

ವೇಲು ಗಾರ್ಡನ್​ ನಿವಾಸಿಗರಾದ ಕೆಲವರು ಈ ರೀತಿಯ ಗಲಭೆಗಳನ್ನ ಸೃಷ್ಟಿ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ವೇಲು ಗಾರ್ಡನ್​ ಬಳಿ ಇರೋ ಸಿಸಿಟಿವಿ ಕೂಡ ದೊರೆತಿದ್ದು,  ಆ ದೃಶ್ಯಗಳಲ್ಲಿ ಸಿಕ್ಕ ಸಿಕ್ಕ ವಾಹನಗಳ ಮೇಲೆ ಕಿಡಿಗೇಡಿಗಳು ದಾಳಿ ನಡೆಸಿ ದ್ವಂಸ ನಡೆಸುತ್ತಿರುವ ದೃಶ್ಯ ಕೂಡ ಸೆರೆಯಾಗಿದೆ. ಇಷ್ಟಾದರು ಈ ಕಿಡಿಗೇಡಿಗಳ ವಿರುದ್ಧ ಯಾವುದೇ ಯಾವುದೇ ಕ್ರಮ ಕೂಡ ಕೈ ಗೊಂಡಿಲ್ಲ ಅಂತ  ಮಂಜುಳಾ ನಾರಾಯಣ ಸ್ವಾಮಿ ಆರೋಪ ಮಾಡಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ತೀರ್ಥಹಳ್ಳಿಯ ವಿದ್ಯಾರ್ಥಿನಿಗೆ ಹೃದಯಾಘಾತ, ಶೃಂಗೇರಿ ಕಾಲೇಜು ಹಾಸ್ಟೆಲ್‌ನಲ್ಲಿ ಕುಸಿದು ಬಿದ್ದು ಸಾವು
ಪಿಯುಸಿ ಸರ್ಟಿಫಿಕೇಟ್ ಇದ್ದರೆ ಮಾತ್ರ ವಾಹನಕ್ಕೆ ಪೆಟ್ರೋಲ್ -ಡೀಸೆಲ್, ಡಿ.18ರಿಂದ ಹೊಸ ನಿಯಮ