ಹೆಚ್ಚಾದ ಕಾವೇರಿ ಕಿಚ್ಚು: ತಮಿಳುನಾಡಿನ 10 ಕ್ಕೂ ಹೆಚ್ಚು ವಾಹನಗಳಿಗೆ ಬೆಂಕಿ

Published : Sep 11, 2016, 04:37 PM ISTUpdated : Apr 11, 2018, 12:59 PM IST
ಹೆಚ್ಚಾದ ಕಾವೇರಿ ಕಿಚ್ಚು: ತಮಿಳುನಾಡಿನ 10 ಕ್ಕೂ ಹೆಚ್ಚು ವಾಹನಗಳಿಗೆ ಬೆಂಕಿ

ಸಾರಾಂಶ

ಸುವರ್ಣ ವೆಬ್ ಡೆಸ್ಕ್(ಸೆ.12): ತಮಿಳು ನಾಡಿನ ರಾಮೇಶ್ವರಂ'ನಲ್ಲಿ ಕನ್ನಡಿಗರಿಗೆ ಮೇಲಿನ ಹಲ್ಲೆ, ಆಸ್ತಿ ಪಾಸ್ತಿ ಹಾನಿ ಹಾಗೂ ಸುರ್ಪೀಂ ತೀರ್ಪು ಸಹ ಮತ್ತೇ ನೀರು ಬಿಡಬೇಕು ಎಂದು ತೀರ್ಪು ನೀಡಿರುವುದಕ್ಕೆ ಕನ್ನಡಿಗರು ಆಕ್ರೋಶ ವ್ಯಕ್ತಪಡಿಸಿ ತಮಿಳುನಾಡಿನ ಲಾರಿಗಳಿಗೆ ಬೆಂಕಿ ಹಚ್ಚುವುದು ಸೇರಿದಂತೆ ತಮಿಳು ಮೂಲದವರ ಆಸ್ತಿ ಪಾಸ್ತಿಗೆ ಹಾನಿ ಮಾಡುತ್ತಿದ್ದಾರೆ.

ಕನ್ನಡಪರ ಸಂಘಟನೆಗಳ ಕಾರ್ಯಕರ್ತರು ಮಂಡ್ಯದ ಪಾಂಡವಪುರ, ಮದ್ದೂರು, ಮೈಸೂರು ನಗರ, ಬೆಂಗಳೂರಿನ ಮೈಸೂರು ರಸ್ತೆ, ಕೆಂಗೇರಿ ಉಪನಗರ, ಬಸವನಗುಡಿ, ನೈಸ್ ರಸ್ತೆ ಮುಂತಾದ ಕಡೆ ತಮಿಳುನಾಡಿನ ಲಾರಿಗಳನ್ನು ಸುಟ್ಟು ಹಾಕಿದ್ದಾರೆ.

ತಮಿಳರು ವಾಸಿಸುವ ಬೆಂಗಳೂರಿನ ಹಲವು ಕಡೆ ಹಾಗೂ ಕರ್ನಾಟಕ-ತಮಿಳುನಾಡು ಗಡಿಯಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ. ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಪ್ರಯತ್ನಿಸಿದ ಕನ್ನಡ ಚಳವಳಿ ಪಕ್ಷದ ವಾಟಾಳ್ ನಾಗರಾಜ್, ಕರವೇಯ ಪ್ರವೀಣ್ ಶೆಟ್ಟಿ ಬಣದ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ.

ಹಲವು ಜಿಲ್ಲೆಗಳಲ್ಲಿ ವ್ಯಾಪಿಸಿದ ಆಕ್ರೋಶ

ಕಾವೇರಿ ಕಣಿವೆಯ ಬೆಂಗಳೂರು, ಮಂಡ್ಯ ಹಾಗೂ ಮೈಸೂರು ಅಲ್ಲದೆ ಚಿತ್ರದುರ್ಗಾ, ಚಿಕ್ಕಬಳ್ಳಾಪುರ ಜಿಲ್ಲೆ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಪ್ರತಿಭಟನೆಯ ಕಿಚ್ಚು ಹೆಚ್ಚಾಗುತ್ತಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮಾಲ್‌ನಲ್ಲಿ ಹುಡುಗಿಗೆ ಪ್ರಪೋಸ್ ಮಾಡಿ ಅಲ್ಲೇ ತಾಳಿ ಕಟ್ಟಿದ ಯುವಕ: ವೀಡಿಯೋ ಭಾರಿ ವೈರಲ್
Hate Speech Bill: ಸರ್ವಜನಾಂಗ ಶಾಂತಿಯ ತೋಟ ಆಗಲು ಈ ಮಸೂದೆ ಬೇಕೇಬೇಕು