ಮಾದೇಗೌಡರ ವಿರುದ್ಧ ತಿರುಗಿಬಿದ್ದ ಪ್ರತಿಭಟನಾಕಾರರು

Published : Sep 21, 2016, 07:10 AM ISTUpdated : Apr 11, 2018, 12:40 PM IST
ಮಾದೇಗೌಡರ ವಿರುದ್ಧ ತಿರುಗಿಬಿದ್ದ ಪ್ರತಿಭಟನಾಕಾರರು

ಸಾರಾಂಶ

ಮಂಡ್ಯ(ಸೆ. 21): ಕಾವೇರಿ ಹೋರಾಟದಲ್ಲಿ ತೊಡಗಿಸಿಕೊಂಡಿರುವ ರೈತ ಹೋರಾಟಗಾರ ಜಿ.ಮಾದೇಗೌಡರ ವಿರುದ್ಧ ಪ್ರತಿಭಟನಾಕಾರರೇ ಆಕ್ರೋಶ ವ್ಯಕ್ತಪಡಿಸಿದ ಘಟನೆ ಇಂದು ನಡೆದಿದೆ. ಶಾಸಕರ ರಾಜೀನಾಮೆ ವಿಚಾರವಾಗಿ ಮಾದೇಗೌಡರ ಮಾತು ಪ್ರತಿಭಟನಾಕಾರರಿಗೆ ಅಸಮಾಧಾನ ತಂದಿತು. ಕಾವೇರಿ ಹೋರಾಟದಲ್ಲಿ ಬೂಟಾಟಿಕೆ ರಾಜಕೀಯ ಮಾಡುತ್ತೀರಾ ಎಂದು ಮಾದೇಗೌಡರ ವಿರುದ್ಧ ಜನರು ಕಿಚ್ಚು ಹೊರಹಾಕಿದರು.

ಮಾದೇಗೌಡರು ಹೇಳಿದ್ದೇನು?
ರಾಜೀನಾಮೆ ನೀಡಬಯಸುವ ಜನಪ್ರತಿನಿಧಿಗಳು ತಮ್ಮ ರಾಜೀನಾಮೆಯನ್ನು ಸ್ಪೀಕರ್ ಬದಲು ಪಕ್ಷದ ಮುಖ್ಯಸ್ಥರಿಗೆ ಸಲ್ಲಿಸಿ ಎಂದು ಮಾದೇಗೌಡರು ಇಂದು ಕರೆ ಕೊಟ್ಟರು. ಸ್ಪೀಕರ್'ಗೆ ಕೊಟ್ಟರೆ ನಿಮ್ಮ ರಾಜೀನಾಮೆ ಅಂಗೀಕಾರವಾಗಿಬಿಡಬಹುದು. ಅದರ ಬದಲು ತಮ್ಮ ತಮ್ಮ ಪಕ್ಷದ ಅಧ್ಯಕ್ಷರಿಗೆ ರಾಜೀನಾಮೆ ನೀಡಿ ಎಂದು ಮಾದೇಗೌಡರು ಸಲಹೆ ನೀಡಿದರು. ಹಿರಿಯ ರೈತ ಮುಖಂಡರ ಈ ಮಾತು ಪ್ರತಿಭಟನಾಕಾರರನ್ನು ಕೆರಳಿಸಿತು. ರಾಜೀನಾಮೆಯ ನಾಟಕವಾಡಿ ಬೂಟಾಟಿಕೆ ರಾಜಕಾರಣ ಮಾಡುತ್ತಿದ್ದೀರಾ ಎಂದು ಪ್ರತಿಭಟನಾಕಾರರು ಮಾದೇಗೌಡರ ವಿರುದ್ಧ ಸಿಟ್ಟು ತೋರ್ಪಡಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಅನ್ಯ ಧರ್ಮಿಯ ಜೊತೆ ಮದುವೆ: ಪುತ್ರಿಗೆ ಅಪ್ಪನ ಆಸ್ತಿಯಲ್ಲಿ ಹಕ್ಕಿಲ್ಲ- ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು
ರಸಗೊಬ್ಬರ ಬಳಕೆ ಕಡಿಮೆ ಮಾಡಿ, ಮಣ್ಣಿನ ಆರೋಗ್ಯ ಕಾಪಾಡಿ: ಸಿಎಂ ಸಿದ್ದರಾಮಯ್ಯ ಸಲಹೆ