
ನವದೆಹಲಿ (ಸೆ.18): ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ನಾಳೆ ಕಾವೇರಿ ಮೇಲುಸ್ತುವಾರಿ ಸಮಿತಿಯ ಮಹತ್ವದ ಸಭೆ ನಡೆಯಲಿದೆ.
ಕಾವೇರಿ ಕೊಳ್ಳದ ಬರ ಪರಿಸ್ಥಿತಿ, ಅಂತರ್ಜಲ ಸ್ಥಿತಿ, ಜಲಾಶಯಗಳಲ್ಲಿ ನೀರಿನ ಸ್ಥಿತಿ ಮತ್ತು ಮಳೆ ಪ್ರಮಾಣದೊಂದಿಗೆ ಸಮಿತಿಯ ಮುಂದೆ ವಾದ ಮಂಡಿಸಲು ಸರ್ಕಾರ ಸಿದ್ಧತೆ ನಡೆಸಿದೆ.
ಇದರ ಜತೆಗೆ ತಮಿಳುನಾಡಿನಲ್ಲಿರುವ ವಾಸ್ತವ ಪರಿಸ್ಥಿತಿಯನ್ನೂ ಮೇಲುಸ್ತುವಾರಿ ಸಮಿತಿಗೆ ಮನವರಿಕೆ ಮಾಡಿಕೊಟ್ಟು ಕಾವೇರಿ ನದಿಯಿಂದ ತಮಿಳುನಾಡಿಗೆ ನೀರು ಬಿಟ್ಟರೆ ಕರ್ನಾಟಕ ಎದುರಿಸುವ ಸಂಕಷ್ಟವನ್ನು ತಿಳಿಸಲು ತೀರ್ಮಾನಿಸಲಾಗಿದೆ.
ಸೆ.20ರವರೆಗೆ ತಮಿಳನಾಡಿಗೆ ಪ್ರತಿನಿತ್ಯ 12 ಸಾವಿರ ಕ್ಯೂಸೆಕ್ ನೀರು ಬಿಡುವಂತೆ ಈ ಹಿಂದೆ ಕರ್ನಾಟಕಕ್ಕೆ ಆದೇಶಿಸಿದ್ದ ಸುಪ್ರೀಂಕೋರ್ಟ್, ನಾಳೆ ಮತ್ತೆ ಈ ಕುರಿತ ವಿಚಾರಣೆ ಕೈಗೆತ್ತಿಕೊಳ್ಳಲಿದೆ.
ಹೀಗಾಗಿ ನಾಳೆ ನಡೆಯಲಿರುವ ಕಾವೇರಿ ಮೇಲುಸ್ತುವಾರಿ ಸಮಿತಿ ಸಭೆಯ ತೀರ್ಮಾನ ಕರ್ನಾಟಕದ ಪಾಲಿಗೆ ಮಹತ್ವದ್ದಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.