ಹೇಮಾವತಿ ಜಲಾಶಯ ಪರಿಶೀಲನೆಗೆ ಕಾವೇರಿ ಅಧ್ಯಯನ ತಂಡ

By Web DeskFirst Published Oct 8, 2016, 3:39 AM IST
Highlights

ಕಾವೇರಿ ಕಣಿವೆ ಜಲಾಶಯಗಳಲ್ಲಿನ ನೀರಿನ ಸಂಗ್ರಹ ಪ್ರಮಾಣ ಹಾಗೂ ಕೃಷಿ ಚಟುವಟಿಕೆಗಳ ಬಗ್ಗೆ ಪರಿಶೀಲನೆಗೆ ಆಗಮಿಸಿರುವ ಕೇಂದ್ರದ ತಂಡ, ಇವತ್ತೂ ಕೂಡಾ ಅಧ್ಯಯನ ನಡೆಸಲಿದೆ.

ಇವತ್ತು ಮಾರ್ಕೋನಹಳ್ಳಿ ಜಲಾಶಯ, ಹೇಮಾವತಿ ಜಲಾಶಯ ವೀಕ್ಷಣೆ ಹಾಗೂ ಆ ವ್ಯಾಪ್ತಿಯಲ್ಲಿ ಬರುವ ಅಚ್ಚುಕಟ್ಟು ಪ್ರದೇಶದ ಗ್ರಾಮಗಳಿಗೆ ತೆರಳಿ ರೈತರ ಜತೆ ಸಂವಾದ ಹಾಗೂ ಮಾಹಿತಿ ಪಡೆದು ರಾತ್ರಿ ತಮಿಳುನಾಡಿನ ಮೆಟ್ಟೂರಿಗೆ ತೆರಳಲಿದೆ.

ಬೆಂಗಳೂರು (ಅ.08): ಕಾವೇರಿ ಕಣಿವೆ ಜಲಾಶಯಗಳಲ್ಲಿನ ನೀರಿನ ಸಂಗ್ರಹ ಪ್ರಮಾಣ ಹಾಗೂ ಕೃಷಿ ಚಟುವಟಿಕೆಗಳ ಬಗ್ಗೆ ಪರಿಶೀಲನೆಗೆ ಆಗಮಿಸಿರುವ ಕೇಂದ್ರದ ತಂಡ, ಇವತ್ತೂ ಕೂಡಾ ಅಧ್ಯಯನ ನಡೆಸಲಿದೆ.

ಇವತ್ತು ಮಾರ್ಕೋನಹಳ್ಳಿ ಜಲಾಶಯ, ಹೇಮಾವತಿ ಜಲಾಶಯ ವೀಕ್ಷಣೆ ಹಾಗೂ ಆ ವ್ಯಾಪ್ತಿಯಲ್ಲಿ ಬರುವ ಅಚ್ಚುಕಟ್ಟು ಪ್ರದೇಶದ ಗ್ರಾಮಗಳಿಗೆ ತೆರಳಿ ರೈತರ ಜತೆ ಸಂವಾದ ಹಾಗೂ ಮಾಹಿತಿ ಪಡೆದು ರಾತ್ರಿ ತಮಿಳುನಾಡಿನ ಮೆಟ್ಟೂರಿಗೆ ತೆರಳಲಿದೆ.

ಕಾವೇರಿ ಕೊಳ್ಳ ಅಧ್ಯಯನ: ಎಲ್ಲೂ ಕಾಣಲಿಲ್ಲ ನೀರು; ಕಂಡದ್ದು ಒಣಗಿದ ಪೈರು

Latest Videos

ಕೇಂದ್ರದ ಅಧ್ಯಯನ - ಎರಡನೇ ದಿನ

ಬೆಳಗ್ಗೆ 9 ಗಂಟೆಗೆ: ಕೆಆರ್‌ಎಸ್‌ನಿಂದ ಹೆಲಿಕಾಪ್ಟರ್‌ ಮೂಲಕ ಕೆ.ಆರ್‌.ಪೇಟೆಗೆ ಪ್ರಯಾಣ.

ಬೆಳಗ್ಗೆ 9.30- 10: ಹೇಮಾವತಿ ಎಡದಂಡೆ ಕಾಲುವೆ, ಮೂರ್ಖನಹಳ್ಳಿ, ತೊಂಡೇಕೆರೆ ಪ್ರದೇಶಗಳ  ವೀಕ್ಷಣೆ

ಬೆಳಗ್ಗೆ 10ರಿಂದ ಮಧ್ಯಾಹ್ನ 1: ಚಿನಕುರಳಿ, ಹೇಮಗಿರಿ ಮತ್ತು ಮಂಡಗೆರೆ ಅಣೆಕಟ್ಟು ಕಾಲುವೆ ಅಚ್ಚುಕಟ್ಟು ವೀಕ್ಷಿಸಿ ಹೊಳೆನರಸೀಪುರ ಮಾರ್ಗವಾಗಿ ಗೊರೂರಿಗೆ ಪ್ರಯಾಣ

ಮಧ್ಯಾಹ್ನ: ಹೇಮಾವತಿ ಡ್ಯಾಂ, ಹೇಮಾವತಿ ಬಲದಂಡೆ ಮೇಲು ಕಾಲುವೆ, ಅರಕಲಗೂಡು ಪರಿಶೀಲನೆ

ಸಂಜೆ 4.45: ಹಾಸನದಿಂದ ಹೆಲಿಕಾಪ್ಟರ್‌ ಮೂಲಕ ಬೆಂಗಳೂರಿಗೆ ಪ್ರಯಾಣ

ರಾತ್ರಿ 8 ಗಂಟೆ: ರಸ್ತೆ ಮಾರ್ಗವಾಗಿ ತಮಿಳುನಾಡಿನ ಮೆಟ್ಟೂರಿಗೆ ಪ್ರಯಾಣ

click me!