
ಮೆಟ್ಟೂರು (ಅ.9): ಕರ್ನಾಟಕದಲ್ಲಿ ಕಾವೇರಿ ಕೊಳ್ಳದ ಅಧ್ಯಯನ ಮುಗಿಸಿರುವ ಕೇಂದ್ರ ಜಲ ಆಯೋಗ ತಮಿಳುನಾಡಿಗೆ ಭೇಟಿ ನೀಡಿದೆ. ಅಧ್ಯಕ್ಷ ಜಿ.ಎಸ್ ಝಾ ನೇತೃತ್ವದ ಕೇಂದ್ರ ಸರ್ಕಾರದ ತಜ್ಞರ ತಂಡ ತಮಿಳುನಾಡಿನ ಮೆಟ್ಟೂರು ಜಲಾಶಯದ ಅಚ್ಚು ಕಟ್ಟು ಪ್ರದೇಶದಲ್ಲಿ ಪರಿಶೀಲನೆ ನಡೆಸಿತು. ಮೆಟ್ಟೂರು ಜಲಾಶಯದಲ್ಲಿ ಸಂಗ್ರಹವಾಗಿರುವ ನೀರು, ಒಳ ಹರಿವು, ಹೊರ ಹರಿವನ್ನು ಪರಿಶೀಲನೆ ನಡೆಸಿದೆ. ಅಲ್ಲದೆ ಜಲಾನಯನ ಭಾಗದಲ್ಲಿ ಬೆಳೆದಿರುವ ಬೆಳೆಯ ಪರಿಸ್ಥಿತಿಯನ್ನು ವೀಕ್ಷಣೆ ಮಾಡಿದ್ರು. ಎರಡು ದಿನ ತಮಿಳುನಾಡಿನಲ್ಲಿ ಅಧ್ಯಯನ ನಡೆಸಿ ಬಳಿಕ ಚೆನ್ನೈನಲ್ಲಿ ಸಭೆ ನಡೆಸಲಿದೆ. ವರದಿ ತಯಾರಿಸಿ ಅಕ್ಬೋಬರ್ 17ರಂದು ಸುಪ್ರೀಂಕೋರ್ಟ್ ಕೇಂದ್ರ ಅದ್ಯಯನ ತಂಡ ವರದಿ ಸಲ್ಲಿಸಲಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.