
ಬೆಂಗಳೂರು(ಸೆ.06): ತಮಿಳುನಾಡಿಗೆ ಕಾವೇರಿ ನೀರು ಬಿಡುವಂತೆ ಸುಪ್ರೀಂ ಆದೇಶ ನೀಡಿದೆ. ಈ ಹಿನ್ನೆಲೆಯಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಸಿಎಂ ಸಿದ್ದರಾಮಯ್ಯ ಇಂದು ಕಾನೂನು ತಜ್ಞರ ಜೊತೆ ಮಾತುಕತೆ ನಡೆಸಲಿದ್ದಾರೆ.
ಬೆಳಗ್ಗೆ ಕಾನೂನು ತಜ್ಞರ ಜೊತೆ ಮಾತುಕತೆ ನಡೆಸಿ ಸಂಜೆ 6 ಗಂಟೆಗೆ ಉಭಯ ಸದನ ನಾಯಕರ ಸಭೆ ನಡೆಸಲಿದ್ದಾರೆ. ಸಭೆಯಲ್ಲಿ ರಾಜ್ಯದ ಕೇಂದ್ರ ಸಚಿವರು, ಸಂಸದರು ಭಾಗವಹಿಸಲಿದ್ದಾರೆ. ಇದೇ ವೇಳೆ ಎಲ್ಲ ವಿಚಾರಗಳನ್ನು ಕೋರ್ಟ್ ಮುಂದೆ ಮಂಡಿಸಿದ್ದೇವೆ. ಆದರೂ ಈ ರೀತಿ ಸುಪ್ರೀಂಕೋರ್ಟ್ ತೀರ್ಪು ನೀಡಿದೆ. ಮೇಲುಸ್ತುವಾರಿ ಸಮಿತಿ ಮುಂದೆ ಕೂಡ ಮನವಿ ಸಲ್ಲಿಸುತ್ತೇವೆ.
ಇಂದು ಚರ್ಚೆ ನಡೆಸಿ ಕಾನೂನು ಪ್ರಕಾರ ಮುಂದಿನ ನಿರ್ಧಾರ ತೆಗೆದುಕೊಳ್ಳುತ್ತೇವೆ ಎಂದು ಸಿಎಂ ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.