ನಾಳೆ ಸುಪ್ರೀಂಕೋರ್ಟ್’ನಿಂದ ಕಾವೇರಿ ತೀರ್ಪು ಹೊರ ಬೀಳುವ ಸಾಧ್ಯತೆ?

Published : Feb 15, 2018, 03:25 PM ISTUpdated : Apr 11, 2018, 12:55 PM IST
ನಾಳೆ ಸುಪ್ರೀಂಕೋರ್ಟ್’ನಿಂದ ಕಾವೇರಿ ತೀರ್ಪು ಹೊರ ಬೀಳುವ ಸಾಧ್ಯತೆ?

ಸಾರಾಂಶ

ಬಹುಕಾಲದಿಂದ ಸುಪ್ರೀಂಕೋರ್ಟ್’ನಲ್ಲಿ ವಿಚಾರಣೆಗೊಳಪಡುತ್ತಿರುವ ಕಾವೇರಿ ನದಿ ನೀರು ಹಂಚಿಕೆ ತೀರ್ಪನ್ನು ಸುಪ್ರೀಂ ಕೋರ್ಟ್​ ನಾಳೆ ನೀಡುವ ಸಾಧ್ಯತೆಯಿದೆ.

ಬೆಂಗಳೂರು (ಫೆ.15): ಬಹುಕಾಲದಿಂದ ಸುಪ್ರೀಂಕೋರ್ಟ್’ನಲ್ಲಿ ವಿಚಾರಣೆಗೊಳಪಡುತ್ತಿರುವ ಕಾವೇರಿ ನದಿ ನೀರು ಹಂಚಿಕೆ ತೀರ್ಪನ್ನು ಸುಪ್ರೀಂ ಕೋರ್ಟ್​ ನಾಳೆ ನೀಡುವ ಸಾಧ್ಯತೆಯಿದೆ.  ಈ ಹಿನ್ನಲೆಯಲ್ಲಿ ಮುನ್ನಚ್ಚರಿಕಾ ಕ್ರಮವಾಗಿ ಮಂಡ್ಯ ಜಿಲ್ಲೆಯಾದ್ಯಂತ ಬಿಗಿ ಭದ್ರತೆ ಮಾಡಲಾಗಿದೆ. ಆದರೆ ಈ ವರದಿಯನ್ನು ಸಿಎಂ ಸಿದ್ದರಾಮಯ್ಯ ನಿರಾಕರಿಸಿದ್ದಾರೆ. ನನಗೆ ಬಂದ ಮಾಹಿತಿ ಪ್ರಕಾರ ನಾಳೆ ಸುಪ್ರೀಂಕೋರ್ಟ್’ನಲ್ಲಿ ತೀರ್ಪು ಹೊರ ಬರುವುದಿಲ್ಲ. ಫೆ.23 ರಂದು ಹೊರ ಬೀಳುವ ಸಾಧ್ಯತೆ ಇದೆ ಎಂದಿದ್ದಾರೆ. 

ಕರ್ನಾಟಕದ ವಾದವೇನು ?

ಕಾವೇರಿ ಜಲ ವಿವಾದ ನ್ಯಾಯಮಂಡಳಿ 2007 ರ ಫೆ. 5 ರಂದು ತೀರ್ಪು ನೀಡಿತ್ತು. ಈ ತೀರ್ಪಿನಲ್ಲಿ ಕೇರಳಕ್ಕೆ 30 ಟಿಎಂಸಿ, ಕರ್ನಾಟಕಕ್ಕೆ 270, ತಮಿಳುನಾಡಿಗೆ 419 ಮತ್ತು ಪುದುಚೆರಿಗೆ 7 ಟಿಎಂಸಿ ನೀರು ಹಂಚಿತ್ತು.  ಇದರ ಪ್ರಕಾರ ಕರ್ನಾಟಕವು ತಮಿಳುನಾಡಿಗೆ ವರ್ಷಕ್ಕೆ 192 ಟಿಎಂಸಿ ನೀರು ಕೊಡಬೇಕು.  ಇದರಲ್ಲಿ 156 ಟಿಎಂಸಿಯನ್ನು ಜೂನ್‌ನಿಂದ ಅಕ್ಟೋಬರ್‌ ಒಳಗೇ ಬಿಡಬೇಕು.  ಆದರೆ, ಸಕಾಲದಲ್ಲಿ ಮಳೆ ಬೀಳದೆ ಕೆಲವೊಮ್ಮೆ ತಿಂಗಳ ಲೆಕ್ಕಾಚಾರದ ನೀರನ್ನು ಬಿಡುಗಡೆ ಮಾಡಲು ಸಾಧ್ಯವಾಗದಿದ್ದಾಗ ಎರಡು ರಾಜ್ಯಗಳ ನಡುವೆ ಸಂಘರ್ಷ ಉಂಟಾಗುತ್ತದೆ. 2016ರಲ್ಲಿ ಭಾರಿ ಹಿಂಸಾಚಾರವೇ ನಡೆದಿತ್ತು. ಲಭ್ಯತೆ ಗಮನಿಸಿ ನೀರು ಬಿಡುಗಡೆಗೆ ಅನುಕೂಲವಾಗುವಂತೆ ತೀರ್ಪನ್ನು ಮರುಪರಿಶೀಲಿಸಬೇಕು ಎನ್ನುವುದು ಕರ್ನಾಟಕದ ವಾದ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಡಿಜಿಟಲ್ ಬ್ಯಾನ್ ಮಾಡಿ ದೇಶಕ್ಕೆ ಮಾದರಿಯಾದ ಗಡಿಗ್ರಾಮ: ಪ್ರತಿನಿತ್ಯ ಮೊಬೈಲ್, ಟಿವಿ 2 ಗಂಟೆ ಬಂದ್!
ಬಾಂಗ್ಲಾದಲ್ಲಿ ಹಿಂದೂಗಳ ಮೇಲೆ ಹಿಂಸಾಚಾರ, ಇದು ಯೂನಸ್ ಸರ್ಕಾರದ ವ್ಯವಸ್ಥಿತ ಪಿತೂರಿ: ಶೇಖ್ ಹಸೀನಾ ಗಂಭೀರ ಆರೋಪ