ಕೆಂಪಾದ ಕಾವೇರಿ ನೀರು

Published : Aug 23, 2018, 10:09 AM ISTUpdated : Sep 09, 2018, 10:16 PM IST
ಕೆಂಪಾದ ಕಾವೇರಿ ನೀರು

ಸಾರಾಂಶ

ಕಾವೇರಿ ನದಿ ಈಗ ಕೆಂಪಾಗಿದೆ. ಮನೆಗಳಿಗೆ ಪೂರೈಕೆಯಾಗುತ್ತಿರುವ ನೀರು ಸಂಪೂರ್ಣ ಕೆಂಪು ಬಣ್ಣಕ್ಕೆ ತಿರುಗಿದೆ. ಕೊಡಗು ಜಿಲ್ಲೆಯಲ್ಲಿ ಆಗಿರುವ ಭೂ ಕುಸಿತದ ಪರಿಣಾಮವಾಗಿ ನೀರು ಸಂಪೂರ್ಣ ಕೆಸರುಮಯವಾಗಿದೆ. 

ಬೆಂಗಳೂರು: ರಾಜ್ಯಾದ್ಯಂತ ಮಳೆ ಕ್ಷೀಣಿಸಿದ್ದು, ಜನರು ನಿಟ್ಟುಸಿರು ಬಿಡುವಂತಾಗಿದೆ. ಕರಾವಳಿ, ಮಳೆನಾಡು ಸೇರಿದಂತೆ ಬೆಳಗಾವಿ, ಧಾರವಾಡದಲ್ಲಿ ಅಲ್ಪ ಪ್ರಮಾಣದಲ್ಲಿ ಮಾತ್ರ ಮಳೆ ದಾಖಲಾಗಿದೆ. ಆದರೆ, ಕಳೆದ ವಾರ ಮಳೆ ಅಬ್ಬರದಿಂದಾಗಿ ಆಗಿರುವ ಹಾನಿಯನ್ನು ಸರಿಪಡಿಸುವುದೇ ದೊಡ್ಡ ಸವಾಲಾಗಿದೆ.

ಉತ್ತರ ಕನ್ನಡ, ಧಾರವಾಡ, ಶಿವಮೊಗ್ಗ, ಬೆಳಗಾವಿ, ಚಿಕ್ಕಮಗಳೂರು ಜಿಲ್ಲೆಯ ಬಹುತೇಕ ತಾಲೂಕಿನಲ್ಲಿ ಆಗೊಮ್ಮೆ ಈಗೊಮ್ಮೆ ಮಳೆ ಸುರಿಯುತ್ತಿದೆ. ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನಲ್ಲಿ 2 ಕಡೆ ಗುಡ್ಡ ಕುಸಿಯುವ ಭೀತಿ ಎದುರಾಗಿದೆ. 2 ಮನೆಗಳು ಭಾಗಶಃ ಕುಸಿದಿವೆ. ಕೊಡಗು ಜಿಲ್ಲೆಯಲ್ಲಿ ಆಗಿರುವ ಭೂ ಕುಸಿತದ ಮಣ್ಣು ನೇರವಾಗಿ ನದಿ ಸೇರಿದ್ದರಿಂದ ಕಾವೇರಿ ನದಿ ನೀರು ಕೆಂಪು ಬಣ್ಣಕ್ಕೆ ತಿರುಗಿದೆ.

ಶ್ರೀರಂಗಪಟ್ಟಣ, ಗಂಜಾಂ, ನಗುವನಹಳ್ಳಿ, ಮೇಳಾಪುರ ಸೇರಿದಂತೆ ಸುತ್ತಮುತ್ತಲ ಗ್ರಾಮಗಳಿಗೆ ಕಾವೇರಿ ನೀರನ್ನು ಕುಡಿಯುವ ಉದ್ದೇಶದಿಂದ ಪೂರೈಕೆ ಮಾಡಲಾಗುತಿದೆ. ಆದರೆ ಈ ನೀರು ಕೆಂಪು ಮಿಶ್ರಿತ ಬಣ್ಣದಿಂದ ಕೂಡಿದೆ. ರಾಮನಾಥಪುರದಲ್ಲಿ ಇತ್ತೀಚೆಗೆ ಎಡೆಬಿಡದೇ ಸುರಿಯುತ್ತಿದ್ದ ಮಳೆ ಎರಡು ದಿನಗಳಿಂದ ಬಿಡುವು ನೀಡಿದೆ.

ಇದರಿಂದ ಬತ್ತದ ಕೃಷಿ ಚಟುವಟಿಕೆ ಗರಿಗೆದರಿದೆ. ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಳೆ ಬಿಡುವು ಕೊಟ್ಟಿತ್ತು. ಆದರೆ, ತಾಲೂಕಿನ ಬೊಗಸೆ ಗ್ರಾಮದ ಬಳಿ ರಸ್ತೆ ಕುಸಿದಿದ್ದರಿಂದ ವಾಹನಗಳ ಸಂಚಾರಕ್ಕೆ ಅಡಚಣೆಯಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಮಧ್ಯೆ ಖುರ್ಚಿ ಕಾದಾಟ ಇಲ್ಲ: ಬಸವರಾಜ ರಾಯರೆಡ್ಡಿ
ಮದುವೆ ನಂತರ ಕಾರಿನ ಸ್ಟೇರಿಂಗ್ ಹಿಡಿದ ವಧು; ದೇವ್ರೇ ಕಾಪಾಡಪ್ಪಾ ಎಂದು ಕೈಮುಗಿದು ಕುಳಿತುಕೊಂಡ ವರ!