ದಾಬೋಲ್ಕರ್ ಹತ್ಯೆ ಆರೋಪಿಗಳ ಬಗ್ಗೆ ಮಾಹಿತಿ ನೀಡಿದವರಿಗೆ 5 ಲಕ್ಷ ರೂ ಬಹುಮಾನ

Published : Mar 01, 2017, 03:46 PM ISTUpdated : Apr 11, 2018, 01:06 PM IST
ದಾಬೋಲ್ಕರ್ ಹತ್ಯೆ ಆರೋಪಿಗಳ ಬಗ್ಗೆ ಮಾಹಿತಿ ನೀಡಿದವರಿಗೆ 5 ಲಕ್ಷ ರೂ ಬಹುಮಾನ

ಸಾರಾಂಶ

ವಿಚಾರವಾದಿ ಹಾಗೂ ಕಾರ್ಯಕರ್ತ ನರೇಂದ್ರ ದಾಬೋಲ್ಕರ್ ಹತ್ಯೆಯ ಪ್ರಮುಖ ಆರೋಪಿಗಳಾದ ಸಾರಂಗ್ ಅಕೋಲ್ಕರ್ ಮತ್ತು ವಿನಯ್ ಪವಾರ್ ಬಗ್ಗೆ ಮಾಹಿತಿ ನೀಡಿದವರಿಗೆ 5 ಲಕ್ಷ ರೂ. ಬಹುಮಾನ ನೀಡುವುದಾಗಿ ಸಿಬಿಐ ಘೋಷಿಸಿದೆ.

ನವದೆಹಲಿ(ಮಾ.01): ವಿಚಾರವಾದಿ ಹಾಗೂ ಕಾರ್ಯಕರ್ತ ನರೇಂದ್ರ ದಾಬೋಲ್ಕರ್ ಹತ್ಯೆಯ ಪ್ರಮುಖ ಆರೋಪಿಗಳಾದ ಸಾರಂಗ್ ಅಕೋಲ್ಕರ್ ಮತ್ತು ವಿನಯ್ ಪವಾರ್ ಬಗ್ಗೆ ಮಾಹಿತಿ ನೀಡಿದವರಿಗೆ 5 ಲಕ್ಷ ರೂ. ಬಹುಮಾನ ನೀಡುವುದಾಗಿ ಸಿಬಿಐ ಘೋಷಿಸಿದೆ.

2013, ಆ.20 ರಂದು ದಾಬೋಲ್ಕರ್ ಹತ್ಯೆಯಾದ ಕೆಲವೇ ಗಂಟೆಗಳಲ್ಲಿ ಖಂಡೇಲ್ವಾಲರನ್ನು ಪೊಲೀಸರು ಬಂಧಿಸಿದ್ದರು. ಆಗ ಸಿಬಿಐ ವಿಚಾರಣೆ ವೇಳೆ ನನ್ನ ಹಾಗೂ ನನ್ನ ಸಹವರ್ತಿ ಮನೀಶ್ ನಾಗೋರಿ ಮೇಲೆ ಭ್ರಷ್ಟಾಚಾರ ನಿಗ್ರಹ ದಳ (ಎಟಿಎಸ್) ಸುಳ್ಳು ಪ್ರಕರಣವನ್ನು ದಾಖಲಿಸಿದೆ.  ವಿಚಾರಣೆ ವೇಳೆ ಒತ್ತಾಯಪೂರ್ವಕವಾಗಿ ತಪ್ಪೊಪ್ಪಿಕೊಳ್ಳುವಂತೆ ಹೇಳಿದ್ದಾರೆ ಎಂದು ಹೇಳಿದ್ದ.

ಗೋವಿಂದ ಪನ್ಸಾರೆ ಮತ್ತು ದಾಬೋಲ್ಕರ್ ಹತ್ಯೆಯ ನಿಧಾನಗತಿ ತನಿಖೆಗೆ ಬಾಂಬೆ ಹೈಕೋರ್ಟ್ ಜನವರಿಯಲ್ಲಿ ಅಸಮಾಧಾನ ವ್ಯಕ್ತಪಡಿಸಿದೆ. ಸಿಬಿಐ. ವಿಶೇಷ ತನಿಖಾ ದಳಕ್ಕೆ ಚುರುಕು ಮುಟ್ಟಿಸಿದೆ. ಸಮಯವನ್ನು ಗಮನದಲ್ಲಿಟ್ಟುಕೊಳ್ಳಿ. ಪ್ರಕರಣದ ತನಿಖೆಯಲ್ಲಿ ಶಕ್ತಿಯನ್ನು ವ್ಯರ್ಥಗೊಳಿಸಬೇಡಿ ಎಂದು ಕೋರ್ಟ್ ಹೇಳಿದೆ.

ಇದೀಗ ತನಿಖೆ ಚುರುಕುಗೊಳಿಸಿರುವ ಸಿಬಿಐ ಆರೋಪಿಗಳ ಬಗ್ಗೆ ಮಾಹಿತಿ ನೀಡಿದವರಿಗೆ 5 ಲಕ್ಷ ರೂ ಬಹುಮಾನ ಕೊಡುವುದಾಗಿ ಘೋಷಿಸಿದೆ.  

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

UIDAI Rules: ಯಾವುದೇ ಹೋಟೆಲ್‌ನಲ್ಲಿ ಆಧಾರ್ ಕಾರ್ಡ್ ಫೋಟೋಕಾಪಿ ನೀಡೋ ಅಗತ್ಯವಿಲ್ಲ: ಈ ಹೊಸ ನಿಯಮ ತಿಳ್ಕೊಳ್ಳಿ
ತಾಯಿಯ ಜಾತಿ ಆಧಾರದಲ್ಲೇ ಮಗಳಿಗೆ ಜಾತಿ ಪ್ರಮಾಣಪತ್ರ: ಸುಪ್ರೀಂ ಮಹತ್ವದ ತೀರ್ಪು