ಸಿಬಿಐ ಹಾಗೂ ಮೋದಿ ಸರ್ಕಾರದ ಹಗ್ಗಜಗ್ಗಾಟ ಮುಂದುವರಿದಿದೆ. ಮೋದಿ ಸರ್ಕಾರದ ವಿರುದ್ಧ ತೊಡೆತಟ್ಟಿ ಸುಪ್ರೀಂ ಮೆಟ್ಟಿಲೇರಿ ಮತ್ತೆ ಅಧಿಕಾರಕ್ಕೆ ಬಂದಿದ್ದ ಸಿಬಿಐ ನಿರ್ದೇಶಕ ಸಂಕಷ್ಟಕ್ಕೆ ಸಿಲುಕಿದ್ದಾರೆ.
ನವದೆಹಲಿ. [ಜ.10] ಕೇಂದ್ರೀಯ ತನಿಖಾ ಸಂಸ್ಥೆ (ಸಿಬಿಐ)ಯ ನಿರ್ದೇಶಕ ಸ್ಥಾನದಿಂದ ಅಲೋಕ್ ವರ್ಮಾ ಅವರನ್ನು ವಜಾಗೊಳಿಸಲಾಗಿದೆ.
ಪ್ರಧಾನ ಮಂತ್ರಿ ನರೇಂದ್ರ ಮೋದಿ, ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ಹಾಗೂ ಕಾಂಗ್ರೆಸ್ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ ನೇತೃತ್ವದ ಡಿಎಸ್ಪಿಇ ಆಯ್ಕೆ ಸಮಿತಿ ಅಲೋಕ್ ವರ್ಮಾ ಅವರನ್ನು ವಜಾಗೊಳಿಸುವ ನಿರ್ಧಾರ ತೆಗೆದುಕೊಂಡಿದೆ.
ಕೇಂದ್ರಕ್ಕೆ ಸುಪ್ರೀಂ ಚಾಟಿ: ಸಿಬಿಐ ನಿರ್ದೇಶಕರಾಗಿ ಅಲೋಕ ವರ್ಮಾ!
ವರ್ಮಾ ವಿರುದ್ಧದ ಆರೋಪ ಮೇಲ್ನೋಟಕ್ಕೆ ಸಾಬೀತಾಗಿರುವ ಹಿನ್ನೆಲೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ತಿಳಿದು ಬಂದಿದೆ.
ಸಿಬಿಐ ಹಿರಿಯ ಅಧಿಕಾರಿಗಳ ನಡುವಿನ ಕಿತ್ತಾಟದ ಹಿನ್ನೆಲೆಯಲ್ಲಿ ಅ. 23ರ ಮಧ್ಯರಾತ್ರಿ ಅಲೋಕ್ ವರ್ಮಾ ಅವರನ್ನು ರಜೆ ಮೇಲೆ ಕಳುಹಿಸಿ ಕೇಂದ್ರ ಸರ್ಕಾರ ಆದೇಶಿಸಿತ್ತು.
ಧೋವಲ್ ಮಾತು ಕೇಳಿ ವರ್ಮಾ ನೇಮಿಸಿದ್ರಾ ಮೋದಿ?
ಆದ್ರೆ ಕೇಂದ್ರದ ಆದೇಶವನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿತ್ತು. ಈ ಹಿನ್ನೆಲೆಯಲ್ಲಿ ಅಲೋಕ್ ವರ್ಮಾ ಬುಧವಾರ ಕರ್ತವ್ಯಕ್ಕೆ ಮರಳಿದ್ದರು.