ಸಿಬಿಐ ನಿರ್ದೇಶಕ ವಜಾ: ಸೇಡು ತೀರಿಸಿಕೊಂಡ್ರಾ ಮೋದಿ..?

Published : Jan 10, 2019, 08:02 PM IST
ಸಿಬಿಐ ನಿರ್ದೇಶಕ ವಜಾ: ಸೇಡು ತೀರಿಸಿಕೊಂಡ್ರಾ ಮೋದಿ..?

ಸಾರಾಂಶ

ಸಿಬಿಐ ಹಾಗೂ ಮೋದಿ ಸರ್ಕಾರದ ಹಗ್ಗಜಗ್ಗಾಟ ಮುಂದುವರಿದಿದೆ.  ಮೋದಿ ಸರ್ಕಾರದ ವಿರುದ್ಧ ತೊಡೆತಟ್ಟಿ ಸುಪ್ರೀಂ ಮೆಟ್ಟಿಲೇರಿ ಮತ್ತೆ ಅಧಿಕಾರಕ್ಕೆ ಬಂದಿದ್ದ ಸಿಬಿಐ ನಿರ್ದೇಶಕ ಸಂಕಷ್ಟಕ್ಕೆ ಸಿಲುಕಿದ್ದಾರೆ. 


ನವದೆಹಲಿ. [ಜ.10] ಕೇಂದ್ರೀಯ ತನಿಖಾ ಸಂಸ್ಥೆ (ಸಿಬಿಐ)ಯ ನಿರ್ದೇಶಕ ಸ್ಥಾನದಿಂದ ಅಲೋಕ್​ ವರ್ಮಾ ಅವರನ್ನು ವಜಾಗೊಳಿಸಲಾಗಿದೆ.

ಪ್ರಧಾನ ಮಂತ್ರಿ ನರೇಂದ್ರ ಮೋದಿ, ಸುಪ್ರೀಂ ಕೋರ್ಟ್​ ಮುಖ್ಯ ನ್ಯಾಯಮೂರ್ತಿ ರಂಜನ್​ ಗೊಗೊಯ್​ ಹಾಗೂ ಕಾಂಗ್ರೆಸ್​ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ ನೇತೃತ್ವದ ಡಿಎಸ್​ಪಿಇ ಆಯ್ಕೆ ಸಮಿತಿ ಅಲೋಕ್​ ವರ್ಮಾ ಅವರನ್ನು ವಜಾಗೊಳಿಸುವ ನಿರ್ಧಾರ ತೆಗೆದುಕೊಂಡಿದೆ.

ಕೇಂದ್ರಕ್ಕೆ ಸುಪ್ರೀಂ ಚಾಟಿ: ಸಿಬಿಐ ನಿರ್ದೇಶಕರಾಗಿ ಅಲೋಕ ವರ್ಮಾ!

ವರ್ಮಾ ವಿರುದ್ಧದ ಆರೋಪ ಮೇಲ್ನೋಟಕ್ಕೆ ಸಾಬೀತಾಗಿರುವ ಹಿನ್ನೆಲೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ತಿಳಿದು ಬಂದಿದೆ.

ಸಿಬಿಐ ಹಿರಿಯ ಅಧಿಕಾರಿಗಳ ನಡುವಿನ ಕಿತ್ತಾಟದ ಹಿನ್ನೆಲೆಯಲ್ಲಿ ಅ. 23ರ ಮಧ್ಯರಾತ್ರಿ ಅಲೋಕ್​ ವರ್ಮಾ ಅವರನ್ನು ರಜೆ ಮೇಲೆ ಕಳುಹಿಸಿ ಕೇಂದ್ರ ಸರ್ಕಾರ ಆದೇಶಿಸಿತ್ತು. 

ಧೋವಲ್ ಮಾತು ಕೇಳಿ ವರ್ಮಾ ನೇಮಿಸಿದ್ರಾ ಮೋದಿ?

ಆದ್ರೆ ಕೇಂದ್ರದ ಆದೇಶವನ್ನು ಸುಪ್ರೀಂ ಕೋರ್ಟ್​ ಮಂಗಳವಾರ ರದ್ದುಗೊಳಿಸಿತ್ತು. ಈ ಹಿನ್ನೆಲೆಯಲ್ಲಿ ಅಲೋಕ್​ ವರ್ಮಾ ಬುಧವಾರ ಕರ್ತವ್ಯಕ್ಕೆ ಮರಳಿದ್ದರು. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ದೇಶದ ಮೊದಲ ಹೈಡ್ರೋಜನ್‌ ಚಾಲಿತ ವಾಟರ್‌ ಟ್ಯಾಕ್ಸಿ ವಾರಾಣಸಿಯಲ್ಲಿ ಶುರು
ಆರೋಪ ಸಾಬೀತು : ಪಾಕ್‌ ಐಎಸ್‌ಐ ಮಾಜಿ ಮುಖ್ಯಸ್ಥ ಹಮೀದ್‌ಗೆ 14 ವರ್ಷ ಜೈಲು