
ಮುಂಬೈ(ಜ.31): ಐಡಿಬಿಐ ಬ್ಯಾಂಕ್'ನಿಂದ ಅಕ್ರಮವಾಗಿ ಸಾಲ ಪಡೆದ ಪ್ರಕರಣದಲ್ಲಿ ಇಲ್ಲಿನ ವಿಶೇಷ ನ್ಯಾಯಾಲಯ ಉದ್ಯಮಿ ವಿಜಯ ಮಲ್ಯ ವಿರುದ್ಧ ಜಾಮೀನು ರಹಿತ ವಾರಂಟ್ (ಎನ್'ಬಿಡಬ್ಲ್ಯು) ಹೊರಡಿಸಿದೆ.
ಪ್ರಕರಣದ ತನಿಖೆ ನಡೆಸುತ್ತಿರುವ ಸಿಬಿಐ, ಲಂಡನ್'ನಲ್ಲಿರುವ ಮದ್ಯದ ದೊರೆಯನ್ನು ಗಡೀಪಾರು ಮಾಡಲು ಅನುಮತಿ ನೀಡಬೇಕೆಂದು ಕೋರಿತು. ಇದನ್ನು ಮನ್ನಿಸಿದ ನ್ಯಾಯಾಲಯ, ಮಲ್ಯ ವಿರುದ್ಧ ಜಾಮೀನುರಹಿತ ವಾರಂಟ್ ಹೊರಡಿಸಿತು. ಮಲ್ಯ ಅವರ ಲಂಡನ್ ವಿಳಾಸವನ್ನು ವಾರಂಟ್'ನಲ್ಲಿ ನಮೂದಿಸಲಾಗಿದೆ.
ಈಗಾಗಲೇ ಐಡಿಬಿಐ ಬ್ಯಾಂಕ್ನ ಹಿರಿಯ ಅಧಿಕಾರಿಗಳು ಸೇರಿ 9 ಜನರನ್ನು ಪ್ರಕರಣದಲ್ಲಿ ಬಂಧಿಸಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.